ಲೋಕ ಸಮರಕ್ಕೆ ಬಿಜೆಪಿ ಈಗಿಂದಲೇ ತಯಾರಿ

 

 

ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನವೇ 2024ರ ಲೋಕಸಭಾ ಚುನಾವಣೆಗೆ ಕಮಲ ಪಡೆ ಸಿದ್ಧತೆ ಆರಂಭಿಸಿದೆ. ಉತ್ತರಪ್ರದೇಶ ಗೆದ್ದರೆ ದಿಲ್ಲಿ ಗದ್ದುಗೆ ಏರುವುದು ಸುಲಭ ಎಂಬ ಲೆಕ್ಕಾಚಾರ ಅರಿತಿರುವ ಬಿಜೆಪಿ, 80 ಸ್ಥಾನಗಳಲ್ಲಿ ಎಲ್ಲ ಸೀಟುಗಳನ್ನೂ ಗೆಲ್ಲುವ ಗುರಿಯೊಂದಿಗೆ ಕಾರ್ಯತಂತ್ರ ರೂಪಿಸಿ ಅಖಾಡಕ್ಕಿಳಿಯಲು ನಿರ್ಧರಿಸಿದೆ.ಪೂರ್ವ ಸಿದ್ಧತೆ ಕೈಗೊಳ್ಳಲು ಮುಂದಿನ ತಿಂಗಳಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಕ್ಷೇತ್ರವಾರು ಚುನಾವಣಾ ಪ್ರಚಾರ, ಸಂಸದರು, ಸಚಿವರ ಸಾಧನೆಯ ಮೌಲ್ಯಮಾಪನ, ಅಭ್ಯರ್ಥಿಗಳ ಆಯ್ಕೆ, ಚುನಾವಣೆಯ ಉಸ್ತುವಾರಿ ನೀಡುವುದು ಸೇರಿ ಹಲವು ರಾಜಕೀಯ ರಣತಂತ್ರಗಳ ಬಗ್ಗೆ ಮೂವರು ನಾಯಕರು ಸಮಾಲೋಚನೆ ನಡೆಸಲಿದ್ದಾರೆ.ಬಿಜೆಪಿ ಪಕ್ಷದ ಉನ್ನತ ಮೂಲಗಳ ಪ್ರಕಾರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 75 ವರ್ಷ ದಾಟಿದ ಹಿರಿಯರನ್ನು ಬದಲಿಸಲು ನಾಯಕರು ನಿರ್ಧರಿಸಿದ್ದಾರೆ. ಜನರ ಕೈಗೆ ಸಿಗದ, ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡದ, ಸ್ಥಳೀಯವಾಗಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಸಂಸದರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲು ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

'ಬ್ಲಿಂಕ್’ ಸಿನಿಮಾದಲ್ಲೂ ಮೋಡಿ ಮಾಡಲಿದ್ದಾರೆ ‘ವಿಕ್ರಾಂತ್ ರೋಣ’ ಪಿಟಿ ಮೇಷ್ಟ್ರು ವಜ್ರಧೀರ್ ಜೈನ್.

Wed Dec 28 , 2022
ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಪಿಟಿ ಮೇಷ್ಟ್ರು ಪಾತ್ರದ ಮೂಲಕ ಗಮನ ಸೆಳೆದ ಕಲಾವಿದ ವಜ್ರಧೀರ್ ಜೈನ್. ಚಿತ್ರದಲ್ಲಿ ಲಾರೆನ್ಸ್ ಪಿಂಟೋ ಪಾತ್ರದ ಮೂಲಕ ಪ್ರೇಕ್ಷಕರಿಗೆ ಸಖತ್ ಮನರಂಜನೆ ನೀಡಿದ್ರು. ಅಚ್ಚುಕಟ್ಟಾದ ನಟನೆ ಮೂಲಕ ಗಮನ ಸೆಳೆದು ಪ್ರೇಕ್ಷಕರ ಮನಗೆದ್ದಿರುವ ಇವರು ಈಗ ಸ್ಯಾಂಡಲ್ ವುಡ್ ಅಂಗಳದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಟೈಟಲ್ ಮೂಲಕವೇ ಗಮನ ಸೆಳೆದಿರೋ ‘ಬ್ಲಿಂಕ್’ ಸಿನಿಮಾದಲ್ಲಿ ಮತ್ತೊಂದು ದೊಡ್ಡ ಪಾತ್ರ […]

Advertisement

Wordpress Social Share Plugin powered by Ultimatelysocial