ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಹಿನ್ನೆಲೆ, ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ..! ಭ್ರಷ್ಟ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಗಂಗಾಧರಯ್ಯ ಎಂಬ ಬಿಬಿಎಂಪಿ ಅಧಿಕಾರಿ ಮನೆ ಮೇಲೆ ದಾಳಿ, ಬಿಬಿಎಂಪಿ ಯಲ್ಲಿ ಎಡಿಟಿಪಿಯಾಗಿ ಕಾರ್ಯನಿರ್ವಹಿಸುತ್ತಿರೋ ಗಂಗಾಧರಯ್ಯ, ಅವ್ರ ಯಲಹಂಕದ ಮನೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಅಕ್ರಮ ಆಸ್ತಿ ಗಳಿಗೆ ಬಗ್ಗೆ ಬಂದ ದೂರುಗಳ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡುತ್ತಿರೋ ಲೋಕಾಯುಕ್ತ ಅಧಿಕಾರಿಗಳು, ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ..!
ಮಹಾಲಕ್ಷ್ಮೀ ಲೇ ಔಟ್ ನಲ್ಲಿ ಇರುವ ಗಂಗಾಧರಯ್ಯ ನಿವಾಸ. 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ. ಮನೆ ಒಳಗಡೆ ಇರುವ ಕಾರಿನ ಒಳಗಡೆಯು ಪರಿಶೀಲನೆ ಮಾಡ್ತಿರೋ ಅಧಿಕಾರಿಗಳು, ಒಬ್ಬರು ಎಸ್ಪಿ, ಇಬ್ಬರು ಡಿವೈಎಸ್ಪಿ ಮತ್ತು ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ದಾಳಿ. ಬಿಬಿಎಂಪಿಯಲ್ಲಿ ಎಡಿಜಿಪಿಯಾಗಿರುವ ಗಂಗಾಧರ್, ಗಂಗಾಧರಯ್ಯ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ.
ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ನಗದು ಹಣ ಪತ್ತೆ, ಚಿನ್ನಾಭರಣ,ಬೆಳ್ಳಿ ಆಭರಣಗಳು ಪತ್ತೆ, ಹಣ ಎಣಿಕೆ ಕಾರ್ಯದಲ್ಲಿ ತೊಡಗಿರುವ ಲೋಕಾಯುಕ್ತ ತಂಡ, ವಿದೇಶಿ ಕರೆನ್ಸಿ ಕೂಡ ಮನೆಯಲ್ಲಿ ಪತ್ತೆ, 80 ಲಕ್ಷ ನಗದು ಹಣ,50 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆ, ಒಟ್ಟು ಮೂರು ಕಡೆ ದಾಳಿ ಮಾಡಿರುವ ಲೋಕಾಯುಕ್ತ ತಂಡ. ಯಲಹಂಕದಲ್ಲಿರುವ ಕಚೇರಿ. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಸಂಬಂಧಿಕರ ಮನೆ, ಮತ್ತು ಕುರುಬರಹಳ್ಳಿ ನಿವಾಸದ ಮೇಲೆ ದಾಳಿ.
https://play.google.com/store/apps/details?id=com.speed.newskannada