ಮರಳು ತುಂಬಿದ್ದ ಟಿಪ್ಪರ್ ಲಾರಿಯೊಂದು ಚರಂಡಿಯಲ್ಲಿ ಪಲ್ಟಿಯಾದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಕಲಕಂಬ್ ಬಡಾವಣೆಯಲ್ಲಿ ನಡೆದಿದೆ. ಈ ಘಟನೆಯ ಪರಿಣಾಮ ಟಿಪ್ಪರ್ ಅಡಿಯಲ್ಲಿ ಬಾಲಕ ಸೇರಿ ಇಬ್ಬರು ಸಿಲುಕಿ ಸಾವನ್ನಪ್ಪಿದ್ದಾರೆ.ಕಳೆದ ರಾತ್ರಿ ಕಲಕಂಬ್ ಬಡಾವಣೆಯಲ್ಲಿ ಈ ದುರ್ಘಟನೆ ನಡೆದಿದೆ. ಟಿಪ್ಪರ್ ಲಾರಿಯಡಿ ಸಿಲುಕಿ ಮುಕಂದ್ (12) ಮಹಮ್ಮದ್ ಸಲೀಂ(66) ಸಾವನ್ನಪ್ಪಿದ್ದಾರೆ.ಮೃತರು ವಾಡಿ ಪಟ್ಟಣದ ನಿವಾಸಿಗಳಾದ್ದು, ನಿನ್ನೆ ರಾತ್ರಿ ಮನೆ ನಿರ್ಮಾಣ ಕೆಲಸಕ್ಕೆ ಮರಳು ತಂದಿದ್ದರು. ಈ ವೇಳೆ ಟಿಪ್ಪರ್ ಲಾರಿ ಟೈರ್ ಚರಂಡಿ ಮೇಲೆ ಹತ್ತುತ್ತಿದ್ದಂತೆ ಚರಂಡಿ ಕುಸಿದಿದೆ. ಈ ವೇಳೆ ಇಬ್ಬರು ಲಾರಿಯಡಿ ಸಿಲುಕಿ ಸಾವನ್ನಪ್ಪಿದ್ದಾರೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada