ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡಿ ಯಡವಟ್ಟು ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿನ ಗೋಡೆಗಳ ಮೇಲೆ ಕಮಲದ ಚಿತ್ರ ಬಿಡಿಸಿ ಸಂಸದರು ಅಪರಾಧ ಎಸಗಿದ್ದಾರೆ ಎಂದು ನವ ನಿರ್ಮಾಣ ಪಕ್ಷ ಆರೋಪಿಸಿದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಂಸದ ತೇಜಸ್ವಿ ಸೂರ್ಯ, ಗೋಡೆಗಳ ಮೇಲೆ ಬಿಜೆಪಿಯೇ ಭರವಸೆ ಅನ್ನೋ ಕಮಲದ ಚಿತ್ರಕ್ಕೆ ಪೇಂಟಿಂಗ್ ಮಾಡುತ್ತಿದ್ದಾರೆ. ಸಂಸದರ ಈ ಪೇಂಟಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಂಸದರಾಗಿ ಸಾರ್ವಜನಿಕ ಗೋಡೆಗಳ ಮೇಲೆ ಪೇಟಿಂಗ್ ಮಾಡಿರೋದು ಸರಿನಾ ಅನ್ನೋ ಚರ್ಚೆ ಶುರುವಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿನ ಗೋಡೆಗಳ ಮೇಲೆ ಪೇಂಟಿಂಗ್ ಮಾಡೋದು ಹೈಕೋರ್ಟ್ ಆದೇಶದ ಉಲ್ಲಂಘನೆ. ಬಿಬಿಎಂಪಿ ಜಾಹೀರಾತು ನಿಯಮಗಳ ಪ್ರಕಾರ ಇದು ಅಪರಾಧ. ಹೀಗಿರುವಾಗ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮಕ್ಕೆ ಬೆಂಗಳೂರು ನವ ನಿರ್ಮಾಣ ಪಕ್ಷ ಆಗ್ರಹಿಸಿದೆ. ತೇಜಸ್ವಿ ಸೂರ್ಯ ಪೇಂಟಿಂಗ್ ಮಾಡಿರೋ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಬಿಬಿಎಂಪಿ ಸಂಸದರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಾ ಅನ್ನೋ ಚರ್ಚೆ ನಡೀತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada