ಪ್ರೀತಿಸಿದ ಹುಡುಗಿ ಬೇರೆ ಮದುವೆ ಸಿದ್ಧತೆ ಹಿನ್ನೆಲೆ

ತಾನು ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಮನನೊಂದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನ ನಡೆಸಿದ ಘಟನೆ, ಚಿಕ್ಕಮಗಳೂರು ಜಿಲ್ಲೇಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ. ಬಣಕಲ್ ನ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ ಯುವಕ. ರಾಘವೇಂದ್ರನು ಯುವತಿಯನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ಯುವತಿಯ ಪೋಷಕರು ಯುವತಿಗೆ ಬೇರೆ ಯುವಕನೊಂದಿಗೆ ಮದುವೆ ಮಾಡಲು ಸಿದ್ದತೆ ನಡೆಸಿದ್ದರು.ಈ ವಿಚಾರ ತಿಳಿದು ಮನನೊಂದ ರಾಘವೇಂದ್ರ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ರಾಘವೇಂದ್ರನಿಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ

Please follow and like us:

Leave a Reply

Your email address will not be published. Required fields are marked *

Next Post

ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಲಸಂದಿ ಬೆಳೆ..?

Wed Mar 10 , 2021
ಕಟಾವು ಮಾಡಲು ಹಾಕಿದ್ದ ಅಲಸಂದಿ ಬೆಳೆ ಸುಟ್ಟು ಭಸ್ಮವಾದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದಲ್ಲಿ ನಡೆದಿದೆ. ರೈತ ಫಕೀರಸ್ವಾಮಿ ಕಡ್ಲಿ ಎಂಬುವರಿಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಬೆಂಕಿಗಾಹುತಿಯಾಗಿದೆ. ಜಮೀನಿನಲ್ಲಿ ಕಟಾವು ಮಾಡಿದ್ದ ಅಲಸಂದಿ ಬೆಳೆಯನ್ನು, ರಾಶಿ ಮಾಡಲು ರಸ್ತೆಯ ಮೇಲೆ ತಂದು ಗೂಡು ಹಾಕಲಾಗಿತ್ತು. ರಾಶಿ ಮಷಿನ್ ಗಾಗಿ ಹುಡುಕಾಟ ಕೂಡಾ ನಡೆಸಿದ್ದ. ಇನ್ನೆರಡು ದಿನಗಳಲ್ಲಿ ಮಷಿನ್ ಗೆ ಹಾಕಿ ರಾಶಿ ಮಾಡಲು […]

Advertisement

Wordpress Social Share Plugin powered by Ultimatelysocial