500 ರೂ.ಗೆ LPG ಸಿಲಿಂಡರ್, ರೈತರ ಸಾಲ ಮನ್ನಾ, ಉಚಿತ ವಿದ್ಯುತ್:

ಜೈಪುರ್: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಭರಪೂರ ಭರವಸೆ ನೀಡಲಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ 2023 -24 ನೇ ಸಾಲಿನ ಬಜೆಟ್ ಮಂಡಿಸಿದ್ದು, ರೈತರಿಗೆ 2000 ಯೂನಿಟ್ ವರೆಗೆ ಸಂಪೂರ್ಣ ಉಚಿತವಾಗಿ ವಿದ್ಯುತ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

11 ಲಕ್ಷ ರೈತರಿಗೆ 2000 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು. ಎಲ್ಲರಿಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. ಇದುವರೆಗೆ ರಾಜ್ಯದಲ್ಲಿ 50 ಯೂನಿಟ್ ಉಚಿತವಾಗಿ ವಿದ್ಯುತ್ ನೀಡುತ್ತಿದ್ದು, ಅದನ್ನು 100 ಯೂನಿಟ್ ಗೆ ಹೆಚ್ಚಳ ಮಾಡಲಾಗಿದೆ. ಉಜ್ವಲ ಯೋಜನೆ ಫಲಾನುಭವಿಗಳಿಗೆ 500 ರೂಪಾಯಿ ದರದಲ್ಲಿ ಎಲ್.ಪಿ.ಜಿ. ಸಿಲಿಂಡರ್ ವಿತರಿಸಲಾಗುವುದು. ರೈತರ ಸಾಲ ಮನ್ನಾ ಕಾಯ್ದೆ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿಯಂತ್ರಣ ತಪ್ಪಿದ ಬೈಕ್.

Sat Feb 11 , 2023
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲಕ್ನೋದ ರಾಜಾಜಿಪುರಂನಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ ಗಂಟೆಗೆ 120 ಕಿ.ಮೀ ವೇಗದಲ್ಲಿ ಬರುತ್ತಿದ್ದ ಬೈಕ್, ಸ್ಕೂಟರ್‌ಗೆ ಅಪ್ಪಳಿಸುತ್ತಿರುವ ವೀಡಿಯೊ ದೃಶ್ಯಾವಳಿಯನ್ನ ಸಿಸಿ ಕ್ಯಾಮೆರಾ ತೋರಿಸುತ್ತದೆ. ಡಿಕ್ಕಿಯ ರಭಸಕ್ಕೆ […]

Advertisement

Wordpress Social Share Plugin powered by Ultimatelysocial