̧̤ಮದುವೆ ಹಿಂದಿನ ದಿನ ವರ ಎಸ್ಕೇಪ್.

ಮದ್ವೆ ಅನ್ನೋದು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ತರ ಘಟ್ಟ. ನೂರಾರು ಕನಸಿನ ಬುತ್ತಿಯೊಂದಿಗೆ ವಧು-ವರರು ದಾಂಪತ್ಯಕ್ಕೆ ಕಾಲಿಡುತ್ತಾರೆ. ಅದಕ್ಕೂ ಮುನ್ನ ಮದ್ವೆ ಹೀಗೆ ನಡೆಯಬೇಕು ಎಂದು ಯೋಜನೆ ರೂಪಿಸಿರುತ್ತಾರೆ. ಆದರೆ, ನಮ್ಮ ಕೈಯಲ್ಲಿ ಏನೂ ಇಲ್ಲ ಎನ್ನುವಂತೆ ಕೆಲವೊಮ್ಮೆ ಅನಿರೀಕ್ಷಿತ ಘಟನೆಗಳು ನಡೆದುಬಿಡುತ್ತವೆ.ಇದಕ್ಕೆ ತಾಜಾ ನಿದರ್ಶನ ಎಂಬಂತೆ ಕೇರಳದಲ್ಲಿ ಒಂದು ಘಟನೆ ನಡೆದಿದೆ.ನಾಳೆ ಮದುವೆ ನಡೆಯಬೇಕು ಅನ್ನುವಷ್ಟರಲ್ಲಿ ಮದುವೆಯ ಹಿಂದಿನ ದಿನದಂದು ವರ ನಾಪತ್ತೆಯಾದ ಸಂಗತಿ ವಧುವಿನ ಕುಟುಂಬವನ್ನು ಆಘಾತಕ್ಕೆ ದೂಡಿತು. ಆದರೆ, ನಂತರ ನಡೆದಿದ್ದು ಮದುವೆಗೆ ಬಂದಿದ್ದ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿತು.ವರ ನಾಪತ್ತೆಯಾಗಿದ್ದ ಮರು ದಿನವೇ ಅದೇ ಮುಹೂರ್ತದಲ್ಲಿ ಮದುವೆಗೆ ಬಂದಿದ್ದ ಯುವ ಅತಿಥಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತನನ್ನು ಮದುವೆಯಾಗುವ ಮೂಲಕ ವರನ ಕುಟುಂಬಕ್ಕೆ ವಧುವಿನ ಕುಟುಂಬ ಶಾಕ್​ ನೀಡಿದೆ. ಈ ಘಟನೆ ಕೇರಳದ ಕೊಟ್ಟಾಯಂ ಥಲಯೋಲಪರಂಬುವಿನಲ್ಲಿ ನಡೆದಿದೆ.ಯುವ ಕಾಂಗ್ರೆಸ್ ಕಾರ್ಯಕರ್ತ ಸುಮೀರ್ ಅವರು ಕೊಟ್ಟೂರಿನ ಫಾತಿಮಾ ಶಹನಾಝ್ ಅವರನ್ನು ವಿವಾಹವಾದರು. ಮದುವೆಯ ಎಲ್ಲ ಸಿದ್ಧತೆಗಳು ಮುಗಿದಾಗ ಥಲಯೋಲಪರಂಬುವಿನ ವರ ನಾಪತ್ತೆಯಾಗಿರುವ ಮಾಹಿತಿ ಸಿಕ್ಕಿತು. ಅದರ ಬೆನ್ನಲ್ಲೇ ಮದುವೆಗೆ ಬಂದಿದ್ದ ಸುಮೀರ್, ವಧುವನ್ನು ಮದುವೆಯಾಗುವ ಇಚ್ಛೆಯನ್ನು ತಿಳಿಸಿದ್ದಾನೆ. ಬಳಿಕ ಎರಡು ಮನೆಯವರು ಒಪ್ಪಿ ನದ್ವತ್ ನಗರದ ಕೆಕೆಪಿಜೆ ಸಭಾಂಗಣದಲ್ಲಿ ಮೌಲ್ವಿ ನೇತೃತ್ವದಲ್ಲಿ ವಿವಾಹ ನೆರವೇರಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ಜನತೆಗೆ `ಕರೆಂಟ್ ಶಾಕ್' :

Tue Feb 7 , 2023
ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆಯ ಶಾಕ್, ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲಯತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಎಸ್ಕಾಮ್ ಗಳು ಪ್ರತಿ ಯುನಿಟ್ ಗೆ 1.50 ರಿಂದ 2 ರೂ. ತನಕ ವಿದ್ಯುತ್ ದರ ಏರಿಕೆ […]

Advertisement

Wordpress Social Share Plugin powered by Ultimatelysocial