ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವ ಅವರ ಭಾವಚಿತ್ರಕ್ಕೆ ಹೂಹಾರ ಹಾಕಿ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಉದ್ದೇಶಿಸಿ ಮಾತನಾಡಿದ ಆನಂದ್ ಮಡಿವಾಳ ಅವರು
12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ ಎಂದು.ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, 12ನೇ ಶತಮಾನದ ಕಾಲದಲ್ಲಿ. ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ, ಪುರಸಭೆ ಸಿಬ್ಬಂದಿ ನಿಸಾರ್ ಅಹ್ಮದ್, ಪುರಸಭೆ ಸದಸ್ಯ ಮಹೇಬೊಬ್ ಕಡ್ಡಿಪುಡಿ, ನೈರ್ಮುಲ್ಯಧಿಕಾರಿ ಆರೀಫಾವುನಿಸಾ , ಮಹೇಶ್, ರಂಗನಾಥ್ , ಮುಖಂಡ ಹುಸೇನ್ಅಲಿ,ನಾಗರಾಜ್ ತಳವಾರ ಸೈಯದ್ ಸಾಬ್ , ಶರಣಪ್ಪ ಮಡಿವಾಳ, ಗಂಗಾಧರ್ ಮಡಿವಾಳ, ಶರಣಪ್ಪ ಮಡಿವಾಳ, ವೀರೇಶ್ ಮಡಿವಾಳ ಲಿಂಗಪ್ಪ ಮಡಿವಾಳ, ಬಸವರಾಜ್ ಮಡಿವಾಳ, ಸೇರಿದಂತೆ ಮುಂತಾದವರು ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada