ಮಹಾಶಿವರಾತ್ರಿ; ಭಕ್ತರಿಂದ ಹಂಪಿ ವಿರೂಪಾಕ್ಷನ ದರ್ಶನ

ಹೊಸಪೇಟೆ (ವಿಜಯನಗರ): ಮಹಾಶಿವರಾತ್ರಿ ನಿಮಿತ್ತ ನೂರಾರು ಸಂಖ್ಯೆಯ ಭಕ್ತರು ಸೋಮವಾರ ಹಂಪಿಗೆ ಬಂದು ವಿರೂಪಾಕ್ಷೇಶ್ವರನ ದರ್ಶನ ಪಡೆದರು.

ದೇವಸ್ಥಾನಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ ಮಿಂದೆದ್ದು, ದೇಗುಲದ ವರೆಗೆ ಬರಿಗಾಲಲ್ಲಿ ನಡೆದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ವಿವಿಧ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದದ್ದರಿಂದ ರಥಬೀದಿ, ದೇವಸ್ಥಾನದ ಪರಿಸರದಲ್ಲಿ ಜನಜಾತ್ರೆ ಕಂಡು ಬಂದಿತು.

ಶಿವರಾತ್ರಿ ಪ್ರಯುಕ್ತ ಬೆಳಿಗ್ಗೆ ವಿರೂಪಾಕ್ಷೇಶ್ವರನಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ, ಪೂಜೆ ನೆರವೇರಿಸಲಾಯಿತು. ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನ, ನೀಲಕಂಠ ದೇವಸ್ಥಾನದಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಕ್ರೇನ್‌ ಬಿಕ್ಕಟ್ಟು: ಇಂದೇ ರಾಜಧಾನಿ ಕೀವ್‌ ತೊರೆಯುವಂತೆ ನಾಗರಿಕರಿಗೆ ಭಾರತ ಸೂಚನೆ; ವರದಿ

Tue Mar 1 , 2022
ಹೊಸದಿಲ್ಲಿ: ಉಕ್ರೇನ್‌ ವಿರುದ್ಧ ರಶ್ಯಾ ತನ್ನ ದಾಳಿಯನ್ನು ಮುಂದುವರಿಸಿರುವ ನಡುವೆಯೇ ಹಲವಾರು ಮಂದಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ದೇಶಕ್ಕೆ ಕರೆತರಲಾಗುತ್ತಿದೆ. ಈ ಕಾರ್ಯಾಚರಣೆಯು ಮುಂದುವರಿಯುತ್ತಿರುವಂತೆಯೇ ಇದೀಗ ಭಾರತವು ಉಕ್ರೇನ್‌ ನಲ್ಲಿರುವ ತನ್ನ ನಾಗರಿಕರು ಕೂಡಲೇ ರಾಜಧಾನಿ ಕೀವ್‌ ನಿಂದ ಆದಷ್ಟು ಬೇಗ ಹಾಗೂ ಇಂದೇ ಹೊರ ಬರುವಂತೆ ಸೂಚನೆ ಹೊರಡಿಸಿದೆ ಎಂದು ndtv.com ವರದಿ ಮಾಡಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial