ಮಹಾತ್ಮ ಗಾಂಧೀಜಿ ಪತ್ನಿ ಕೂಡ ತಲೆ ಮೇಲೆ ಸೆರಗು ಹಾಕುತ್ತಿದ್ದರು: ಹಿಜಾಬ್ ಗೆ ಹೆಚ್ ಡಿಕೆ ಬೆಂಬಲ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಧರ್ಮಪತ್ನಿ ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹಿಜಾಬ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಫೋಟೋದಲ್ಲೆಲ್ಲ ನೋಡಿದ್ದೇವೆ.

ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು. ಎಷ್ಟೋ ಬಾರಿ ಬಿಸಿಲಿನ ತಾಪಕ್ಕೆ ಹಿಂದೂ, ಮುಸ್ಲಿಂ ಹೆಣ್ಣುಮಕ್ಕಳು ಶಾಲೆಗೆ ಹೋಗುವಾಗ ಸಮವಸ್ತ್ರದೊಂದಿಗೆ ತಲೆಗೆ ದುಪ್ಪಟ್ಟ ಥರ ಹಾಕುತ್ತಿದ್ದರು. ಅದಕ್ಕೆ ಸಂಬಂಧಿಸಿದ ಫೋಟೋಗಳು ಕೂಡ ನಮ್ಮ ಬಳಿ ಇವೆ. ಎಲ್ಲಾ ಸಮುದಾಯದ ಹೆಣ್ಣುಮಕ್ಕಳು ಯಾವುದೇ ವಿವಾದವಿಲ್ಲದೇ ಕೈಕೈ ಹಿಡಿದು ಶಾಲೆಗೆ ಹೋಗುತ್ತಿರುವ ಫೋಟೋಗಳು ಕೂಡ ಇವೆ. ಅದನ್ನು ಈಗ ವಿವಾದ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಹೆಣ್ಣು ಮಕ್ಕಳು ಸಮವಸ್ತ್ರದ ಜೊತೆಗೆ ಅನೇಕ ಸಂದರ್ಭಗಳಲ್ಲಿ ತಮಗೆ ಬೇಕಾದಂತೆ ದುಪ್ಪಟ್ಟ ಧರಿಸುತ್ತಾರೆ. ಅದನ್ನು ವಿವಾದ ಮಾಡುವುದನ್ನು ಬಿಟ್ಟು ಸರ್ಕಾರ ಸಮವಸ್ತ್ರಕ್ಕೆ ಪೂರಕವಾಗಿ ದುಪ್ಪಟ್ಟ ಹಾಕಿ ಬರುವುದಕ್ಕೆ ಅವಕಾಶ ಮಾಡಿಕೊಡಲಿ. ತಲೆ ಮೇಲೆ ಸೆರಗಿನ ರೀತಿ ವಸ್ತ್ರವನ್ನು ಹಾಕಿಕೊಂಡು ಬರುವುದಕ್ಕೆ ಅವಕಾಶ ಮಾಡಿಕೊಟ್ಟರೆ ಮುಗಿದೇ ಹೋಯಿತು. ಅದನ್ನು ವಿವಾದ ಮಾಡುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ಈ ಎಲ್ಲಾ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುವುದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನನ್ನ ಜೀವನದಲ್ಲಿ ನನ್ನ ಸಂತೋಷದ ವಿಚಾರದಲ್ಲಿ ನಾನು ಯಾವುದಕ್ಕೂ ರಾಜಿ ಮಾಡಿಕೊಳ್ಳಲು ಇಷ್ಟಪಡುವುದಿಲ್ಲ: ದಿವ್ಯಾ ಅಗರ್ವಾಲ್

Fri Mar 18 , 2022
ದಿವ್ಯಾ ಅಗರ್ವಾಲ್ ನನಗೆ ಮತ್ತೆ ಮತ್ತೆ ಸ್ಫೂರ್ತಿ ನೀಡಿದೆ.ಬಿಗ್ ಬಾಸ್ ಮನೆಯಲ್ಲಿ ಅವಳು ಎಲ್ಲಾ ವಿರೋಧಾಭಾಸಗಳನ್ನು ಎದುರಿಸಿ ವಿಜೇತರಾಗಿ ಹೊರಹೊಮ್ಮಿದಾಗ, ನಾನು ಎಂದಿಗೂ ಬಿಟ್ಟುಕೊಡುವುದಿಲ್ಲ ಎಂದು ಅವಳಿಂದ ಕಲಿತಿದ್ದೇನೆ. ಇತ್ತೀಚೆಗಷ್ಟೇ, ಅವಳು ತನ್ನ ಪ್ರತ್ಯೇಕತೆಯನ್ನು ಘೋಷಿಸಿದ ನಂತರ ವರುಣ್ ಸೂದ್  ಕಳೆದ ವಾರ, ತನ್ನ ಸುದೀರ್ಘ ಟಿಪ್ಪಣಿಯಲ್ಲಿ ಅವಳು ತನಗಾಗಿ ಹೇಗೆ ಬದುಕಬೇಕೆಂದು ಬಯಸುತ್ತಾಳೆ ಮತ್ತು ಅದು ನನ್ನನ್ನು ಯೋಚಿಸುವಂತೆ ಮಾಡಿದೆ. ಅದಕ್ಕೂ ಮೊದಲು ಅವಳು ಮುಂಬೈನಲ್ಲಿ ಸ್ವಂತ ಮನೆ ಖರೀದಿಸಿದಾಗ, ಕಠಿಣ […]

Advertisement

Wordpress Social Share Plugin powered by Ultimatelysocial