ಇಂದು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಮಕರ ಸಂಕ್ರಮಣ ಪೂಜೆ ಜರುಗಲಿದೆ. ಈ ಬಳಿಕ ಮಹಾಮಂಗಳಾರತಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯುವಂತ ಮಹಾಮಂಗಳಾರತಿ ಬಳಿಕ, ಭಕ್ತರಿಗೆ ಶಬರಿಮಲೆಯಲ್ಲಿನ ಮಕರಜ್ಯೋತಿ ದರ್ಶನವಾಗಲಿದೆ.
ಶಬರಿಮಲೆಗೆ ವಿರುದ್ಧ ದಿಕ್ಕಿನಲ್ಲಿರುವಂತ ಪೊನ್ನಂಬಲಮೇಡು ಗಿರಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಭಕ್ತರಿಗೆ ಮಕರ ಸಂಕ್ರಾಂತಿಯ ದಿನವಾದ ಇಂದು, ಮಕರ ಜ್ಯೋತಿಯ ದರ್ಶನವಾಗಲಿದೆ ಎಂಬುದಾಗಿ ಶಬರಿಮಲೆ ಆಡಳಿತ ಮಂಡಳಿ ತಿಳಿಸಿದ್ದಾರೆ
ಇದರಂತೆಯೇ ಇಂದು ಸಂಜೆ ಅಯ್ಯಪ್ಪ ಸ್ವಾಮಿಗೆ 7 ಗಂಟೆಗೆ ನಡೆಯುವಂತ ಮಹಾಮಂಗಳಾರತಿ ಬಳಿಕ, ಮಕರ ಜ್ಯೋತಿಯು ಶಬರಿಮಲೆಗೆ ವಿರುದ್ಧ ದಿಕ್ಕಿನಲ್ಲಿರುವಂತ ಪೊನ್ನಂಬಲಮೇಡು ಗಿರಿಯಲ್ಲಿ ಮೂರು ಬಾರಿ ಮಿಣುಕಿ, ಗೋಚರಿಸಿ, ಅದೃಶ್ಯವಾಗಲಿದೆ ಎಂದು ಹೇಳಿದ್ದಾರೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada