ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿರಬೇಕು; ಅನಗತ್ಯ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿ; ಸಿಎಂ ತಾಕೀತು

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹೈಕೋರ್ಟ್ ತೀರ್ಪಿಗಾಗಿ ಎಲ್ಲರೂ ಕಾಯೋಣ, ಯಾರೂ ಕೂಡ ಈ ವಿಚಾರವಾಗಿ ಪ್ರತಿಕ್ರಿಯೆ ನೀಡುವುದು ಬೇಡ ಎಂದು ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಹಲವರು ಹಿಜಾಬ್ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರೂ ಕೂಡ ಹೇಳಿಕೆಗಳನ್ನು ನೀಡಬಾರದು. ಇದರಿಂದ ಯಾವುದೇ ಲಾಭಗಳಿಲ್ಲ, ಹಿಜಾಬ್ ವಿಚಾರವಾಗಿ ಅನಗತ್ಯ ಪ್ರತಿಕ್ರಿಯೆ ನೀಡುವುದನ್ನು ಬಿಡಿ ಎಂದು ಮನವಿ ಮಾಡಿದ್ದಾರೆ.ಮಕ್ಕಳಲ್ಲಿ ಮೊದಲಿನಂತೆ ಸೌಹಾರ್ದತೆ , ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಬೇಕು. ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿರಬೇಕು ಹಾಗಾಗಿ ಅನಗತ್ಯ ಹೇಳಿಕೆಗಳನ್ನು ನೀಡುವುದು, ಗೊಂದಲ ಮೂಡಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ರಾಜಕೀಯ ನಾಯಕರಿಗೂ ಪರೋಕ್ಷ ಸಲಹೆ ನೀಡಿದ್ದಾರೆ.ಇನ್ನು ಶಾಲಾ-ಕಾಲೇಜುಗಳಿಗೆ ರಜೆ ಮುಂದುವರೆಸುವ ಬಗ್ಗೆ ಮಾತನಾಡಿದ ಸಿಎಂ ಇಂದು ಸಂಜೆ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಯಲಿದೆ. ಸಭೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬೇಡದ ವಿಷಯಕ್ಕೆ ವಿಶ್ವದಾದ್ಯಂತ ಕರ್ನಾಟಕವನ್ನು ಚರ್ಚೆಗೀಡು ಮಾಡುವಂತೆ ಮಾಡಿದೆ.

Thu Feb 10 , 2022
ಕರ್ನಾಟಕ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯಲ್ಲಿದೆ. ಬೇಡದ ವಿಷಯಕ್ಕೆ ವಿಶ್ವದಾದ್ಯಂತ ಕರ್ನಾಟಕವನ್ನು ಚರ್ಚೆಗೀಡು ಮಾಡುವಂತೆ ಮಾಡಿದೆ. ಅದಕ್ಕೆ ಕಾರಣ ಮತ್ತೀನೇನು ಅಲ್ಲ ‘ವಸ್ತ್ರ ರಾಜಕಾರಣ’. ಈ ದೇಶದಲ್ಲಿ ಯಾವೆಲ್ಲಾ ವಿಷಯಗಳನ್ನು ಇಟ್ಟುಕೊಂಡು, ಯಾರನ್ನು ಬಳಸಿಕೊಂಡು ರಾಜಕೀಯ ಮಾಡಬೇಕು ಅನ್ನುವುದು ಚೆನ್ನಾಗಿ ಗೊತ್ತಿದೆ.ಅದರ ಭಾಗವೇ ಈ ಕೆಲಸಕ್ಕೆ ಬಾರದ ಹಿಜಾಬ್ Vs ಕೇಸರಿ ಶಾಲು. ಈ ಪ್ರಕರಣ ತಾರಕ್ಕೇರಿದೆ. ಸ್ಥಳೀಯ ಮಟ್ಟದಿಂದ ಹಿಡಿದು ಅಂತರಾಷ್ಟ್ರೀಯ ಮಟ್ಟದ ವರೆಗೂ ಈ ಹಿಜಾಬ್ […]

Advertisement

Wordpress Social Share Plugin powered by Ultimatelysocial