ಬಣ್ಣ ಹಚ್ಚಲು ರೆಡಿಯಾದ ಪುಷ್ಕರ್‌ ಮಲ್ಲಿಕಾರ್ಜುನಯ್ಯ

ಇಲ್ಲಿಯವರೆಗೆ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಈಗ ನಟನಾಗಿ ಬೆಳ್ಳಿ ತೆರೆಗೆ ಎಂಟ್ರಿಕೊಡುವ ಉತ್ಸಾಹದಲ್ಲಿದ್ದಾರೆ.“ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಬಳಿಕ ನಾಯಕ ನಟನಾಗುವ ಘೋಷಣೆ ಮಾಡಿಕೊಂಡಿದ್ದ ಪುಷ್ಕರ್‌, ಸುಮಾರು ಎರಡೂವರೆ ವರ್ಷಗಳ ಕಾಲ ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡಿದ್ದಾರೆ.ಇದೀಗ ಅಂತಿಮವಾಗಿ ಈ ಸಿನಿಮಾದ ಬಹುತೇಕ ಪ್ರೀ-ಪ್ರೊಡಕ್ಷನ್ಸ್‌ ಕೆಲಸಗಳು ಪೂರ್ಣಗೊಂಡಿದ್ದು, ಇದೇ ಭಾನುವಾರ ಈ ಚಿತ್ರ ಅಧಿಕೃತವಾಗಿ ಸೆಟ್ಟೇರಲಿದೆ.ಸದ್ಯ ಪುಷ್ಕರ್‌ ಲುಕ್‌ ಹೊರಬಿದ್ದಿದ್ದು, ಆದಿತ್ಯ ಗುಣವಂತ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಉಳಿದಂತೆ ಪುಷ್ಕರ್‌ ನಾಯಕ ನಟನಾಗುತ್ತಿರುವ ಹೊಸ ಚಿತ್ರದ ಇತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.ಪುಷ್ಕರ್‌ ತಮ್ಮ ಮ್ಯಾನರಿಸಂಗೆ ತಕ್ಕುದಾದ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಂಡಿದ್ದಾರೆ. ಈ ನಡುವೆಯೇ ಪುಷ್ಕರ್‌ ನಿರ್ಮಾಣದ “ಅವತಾರ್‌ ಪುರುಷ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರದಲ್ಲಿ ಶರಣ್‌ ನಾಯಕರಾಗಿ ನಟಿಸಿದ್ದು, ಸುನಿ ನಿರ್ದೇಶಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತೀಯ ರೈಲ್ವೆಯು ಕಾಯ್ದಿರಿಸಿದ, ಕಾಯ್ದಿರಿಸದ ಟಿಕೆಟ್‌ಗಳನ್ನು ಬುಕ್ ಮಾಡಲು ಕ್ರಮಗಳನ್ನು ಸುಲಭಗೊಳಿಸುತ್ತದೆ

Sat Feb 5 , 2022
  ಭಾರತೀಯ ರೈಲ್ವೇಯು ಪ್ರಯಾಣಿಕರಿಗೆ ಕಾಯ್ದಿರಿಸಿದ/ಕಾಯ್ದಿರಿಸದ ಟಿಕೆಟ್‌ಗಳನ್ನು ಪಡೆಯಲು ಅನುಮತಿಸಲು ತೆಗೆದುಕೊಂಡ ಕ್ರಮಗಳನ್ನು ಶುಕ್ರವಾರ ಪ್ರಕಟಿಸಿದೆ. ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನೀವು ಕಾಯ್ದಿರಿಸಿದ ಟಿಕೆಟ್‌ಗಳನ್ನು ಹೇಗೆ ಬುಕ್ ಮಾಡಬಹುದು ಎಂಬುದು ಇಲ್ಲಿದೆ: ಸುಮಾರು 3962 ಸ್ಥಳಗಳಲ್ಲಿ ಕಂಪ್ಯೂಟರೈಸ್ಡ್ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಕೌಂಟರ್‌ಗಳು. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದ (IRCTC) ವೆಬ್‌ಸೈಟ್ ಮೂಲಕ […]

Advertisement

Wordpress Social Share Plugin powered by Ultimatelysocial