ಇಲ್ಲಿಯವರೆಗೆ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದ ಪುಷ್ಕರ್ ಮಲ್ಲಿಕಾರ್ಜುನಯ್ಯ ಈಗ ನಟನಾಗಿ ಬೆಳ್ಳಿ ತೆರೆಗೆ ಎಂಟ್ರಿಕೊಡುವ ಉತ್ಸಾಹದಲ್ಲಿದ್ದಾರೆ.“ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಬಳಿಕ ನಾಯಕ ನಟನಾಗುವ ಘೋಷಣೆ ಮಾಡಿಕೊಂಡಿದ್ದ ಪುಷ್ಕರ್, ಸುಮಾರು ಎರಡೂವರೆ ವರ್ಷಗಳ ಕಾಲ ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡಿದ್ದಾರೆ.ಇದೀಗ ಅಂತಿಮವಾಗಿ ಈ ಸಿನಿಮಾದ ಬಹುತೇಕ ಪ್ರೀ-ಪ್ರೊಡಕ್ಷನ್ಸ್ ಕೆಲಸಗಳು ಪೂರ್ಣಗೊಂಡಿದ್ದು, ಇದೇ ಭಾನುವಾರ ಈ ಚಿತ್ರ ಅಧಿಕೃತವಾಗಿ ಸೆಟ್ಟೇರಲಿದೆ.ಸದ್ಯ ಪುಷ್ಕರ್ ಲುಕ್ ಹೊರಬಿದ್ದಿದ್ದು, ಆದಿತ್ಯ ಗುಣವಂತ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಉಳಿದಂತೆ ಪುಷ್ಕರ್ ನಾಯಕ ನಟನಾಗುತ್ತಿರುವ ಹೊಸ ಚಿತ್ರದ ಇತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.ಪುಷ್ಕರ್ ತಮ್ಮ ಮ್ಯಾನರಿಸಂಗೆ ತಕ್ಕುದಾದ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಂಡಿದ್ದಾರೆ. ಈ ನಡುವೆಯೇ ಪುಷ್ಕರ್ ನಿರ್ಮಾಣದ “ಅವತಾರ್ ಪುರುಷ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರದಲ್ಲಿ ಶರಣ್ ನಾಯಕರಾಗಿ ನಟಿಸಿದ್ದು, ಸುನಿ ನಿರ್ದೇಶಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada