ಮಂಡ್ಯ: ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಶ್ರೀರಾಮಚಂದ್ರನ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಂತ ಸಾಹಿತಿ ಪ್ರೊ.ಕೆಎಸ್ ಭಗವಾನ್ ವಿರುದ್ಧ ದೂರು ದಾಖಲಾಗಿದೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಂತ ಸಾಹಿತಿ ಪ್ರೊ.ಕೆಎಸ್ ಭಗವಾನ್ ಅವರು ಶ್ರೀರಾಮ ಮದ್ಯಸೇವನೆ ಮಾಡುತ್ತಿದ್ದ, ಸೀತೆಯನ್ನು ಕಾಡಿಗೆ ಬಿಟ್ಟಿದ್ದ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಭಗವಾನ್ ಹೇಳಿ ವಿರುದ್ಧ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಈ ಹಿನ್ನಲೆಯಲ್ಲಿ ಇಂದು ಶ್ರೀರಂಗಪಟ್ಟಣ ಪೊಲೀಸ್ ಠಾಣೆಗೆ ತೆರಳಿ, ಸಾಹಿತಿ ಪ್ರೊ.ಕೆಎಸ್ ಭಗವಾನ್ ವಿರುದ್ಧ ದೂರು ನೀಡಿದ್ದಾರೆ.
ದೂರಿನಲ್ಲಿ ಶ್ರೀರಾಮ ಚಂದ್ರನ ಬಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡಿದಂತ ಸಾಹಿಯಿ ಪ್ರೊ.ಕೆ.ಎಸ್ ಭಗವಾನ್ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಬೇಕು. ಆ ಬಳಿಕ ಕೂಡಲೇ ಬಂಧಿಸುವಂತೆ ಒತ್ತಾಯಿಸಲಾಗಿದೆ.
https://play.google.com/store/apps/details?id=com.speed.newskannada