ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ.

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಶ್ರೀರಾಮಚಂದ್ರನ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಂತ ಸಾಹಿತಿ ಪ್ರೊ.ಕೆಎಸ್ ಭಗವಾನ್ ವಿರುದ್ಧ ದೂರು ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಂತ ಸಾಹಿತಿ ಪ್ರೊ.ಕೆಎಸ್ ಭಗವಾನ್ ಅವರು ಶ್ರೀರಾಮ ಮದ್ಯಸೇವನೆ ಮಾಡುತ್ತಿದ್ದ, ಸೀತೆಯನ್ನು ಕಾಡಿಗೆ ಬಿಟ್ಟಿದ್ದ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಭಗವಾನ್ ಹೇಳಿ ವಿರುದ್ಧ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಈ ಹಿನ್ನಲೆಯಲ್ಲಿ ಇಂದು ಶ್ರೀರಂಗಪಟ್ಟಣ ಪೊಲೀಸ್ ಠಾಣೆಗೆ ತೆರಳಿ, ಸಾಹಿತಿ ಪ್ರೊ.ಕೆಎಸ್ ಭಗವಾನ್ ವಿರುದ್ಧ ದೂರು ನೀಡಿದ್ದಾರೆ.

ದೂರಿನಲ್ಲಿ ಶ್ರೀರಾಮ ಚಂದ್ರನ ಬಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡಿದಂತ ಸಾಹಿಯಿ ಪ್ರೊ.ಕೆ.ಎಸ್ ಭಗವಾನ್ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು. ಆ ಬಳಿಕ ಕೂಡಲೇ ಬಂಧಿಸುವಂತೆ ಒತ್ತಾಯಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾರು ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳ.

Sun Jan 22 , 2023
ಕಾರು ಕದ್ದ ಕಳ್ಳನೋರ್ವ ಟೋಲ್‍ಗೇಟ್ ಮೂಲಕ ಪರಾರಿಯಾಗಲು ಯತ್ನಿಸಿರುವ ಘಟನೆ ವಿಜಯಪುರ ನಗರದ ಟೋಲ್‍ಗೇಟ್ ಬಳಿ ರವಿವಾರ ನಡೆದಿದೆ. ಇಳಕಲ್‍ನಲ್ಲಿ ಅನ್ಸಾರಿ ನಂಬರಿನ ಕಾರು ಕಳ್ಳತನ ಮಾಡಿ ಇಳಕಲ್‍ನಿಂದ ವಿಜಯಪುರಕ್ಕೆ ಆಗಮಿಸಿದ್ದಾನೆ. ಈ ವೇಳೆ ನಗರದ ಟೋಲ್‍ಗೇಟ್‍ನಲ್ಲಿ ಸಿಬ್ಬಂದಿಗಳು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಳ್ಳನ ಮೇಲೆ ಅನುಮಾನಗೊಂಡ ಸಿಬ್ಬಂದಿಗಳು ತಪಾಸಣೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಳ್ಳ ಚಾಕು ತೋರಿಸಿ ಹಲ್ಲೆ ಮಾಡಲು ಮುಂದಾಗಿದ್ದಾನೆ. ತಕ್ಷಣವೇ ಇತರೆ ಸಿಬ್ಬಂದಿಗಳು […]

Advertisement

Wordpress Social Share Plugin powered by Ultimatelysocial