ಮಂಡ್ಯದಲ್ಲಿ ನಾಲ್ವರು ಮಕ್ಕಳನ್ನು ಕೊಂದಿದ್ದ ಹಂತಕಿ ಅರೆಸ್ಟ್

 

ಮಂಡ್ಯ: ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಹತ್ಯೆಯಾಗಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.26 ವರ್ಷದ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಮಹಿಳೆಯ ಗಂಡ ಗಂಗಾರಾಮ್ ಮೇಲೆ ಲಕ್ಷ್ಮಿಗೆ ಪ್ರೀತಿ ಇರುತ್ತದೆ.ಗಂಗಾರಾಮನನ್ನು ಪ್ರೀತಿಸುತ್ತಿದ್ದ ಲಕ್ಷ್ಮಿ ಆತನ ಸಂಬಂಧಿಯಾಗಿದ್ದು, ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು.

 

ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ ಹಂತಕಿ ಲಕ್ಷ್ಮಿ ಕಳೆದ ಎರಡು ತಿಂಗಳಿನಿಂದ ಮೈಸೂರಿನಲ್ಲಿ ವಾಸವಾಗಿದ್ದಳು. ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಠಾಣೆ ಪೊಲೀಸರು ಐವರನ್ನು ಕೊಲೆ ಮಾಡಿ ಅಮಾಯಕಿಯಂತೆ ಅಳುತ್ತಿದ್ದ ಲಕ್ಷ್ಮಿಯನ್ನು ವಿಚಾರಣೆ ನಡೆಸಿದ್ದಾರೆ.

ಜನರ ಮಧ್ಯೆ ಕುಳಿತು ದುಃಖಿಸುತ್ತ ನಾಟಕವಾಡಿದ್ದಳು. ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಐವರ ಮರ್ಡರ್ ಕೇಸ್ ಪೊಲೀಸರಿಗೆ ತಲೆನೋವಾಗಿತ್ತು.

ಗಂಗಾರಾಮ್ ಮೇಲೆ ಲಕ್ಷ್ಮಿಗೆ ಪ್ರೀತಿ ಇತ್ತು. ಈ ಸುಳಿವಿನ ಮೇಲೆ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಟ್ಟಿದ್ದಾಳೆ. ಗಂಗಾರಾಮ್ ಮೇಲಿನ ಪ್ರೀತಿಯಿಂದ ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದಾಳೆ ಎನ್ನಲಾಗಿದ್ದು, ಆಕೆಯನ್ನು ಬಂಧಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಂಡ್ಯದಲ್ಲಿ ನಾಲ್ವರು ಮಕ್ಕಳನ್ನು ಕೊಂದಿದ್ದ ಹಂತಕಿ ಅರೆಸ್ಟ್

Wed Feb 9 , 2022
  ಮಂಡ್ಯ: ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಹತ್ಯೆಯಾಗಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.26 ವರ್ಷದ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಗಂಡ ಗಂಗಾರಾಮ್ ಮೇಲೆ ಲಕ್ಷ್ಮಿಗೆ ಪ್ರೀತಿ ಇರುತ್ತದೆ.ಗಂಗಾರಾಮನನ್ನು ಪ್ರೀತಿಸುತ್ತಿದ್ದ ಲಕ್ಷ್ಮಿ ಆತನ ಸಂಬಂಧಿಯಾಗಿದ್ದು, ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು.   ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ ಹಂತಕಿ ಲಕ್ಷ್ಮಿ ಕಳೆದ ಎರಡು ತಿಂಗಳಿನಿಂದ ಮೈಸೂರಿನಲ್ಲಿ ವಾಸವಾಗಿದ್ದಳು. ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಠಾಣೆ ಪೊಲೀಸರು ಐವರನ್ನು ಕೊಲೆ […]

Advertisement

Wordpress Social Share Plugin powered by Ultimatelysocial