ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ !

ಮಂಗಳೂರು: ಎಸ್‌ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಸೇರಿ ಐವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮಿರಾಜುಲ್​ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬ್‌ಉಲ್ಲಾ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥ ಕಾರ್ಮಿಕರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ದುರಂತ ನಡೆದ ಪ್ರದೇಶವು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ಬರಲಿದ್ದು, ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್ ಶುಚಿಗೊಳಿಸಲು ಕೆಳಗಿಳಿದಿದ್ದು, ಈ ವೇಳೆ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಆತನನ್ನು ರಕ್ಷಣೆ ಮಾಡಲೆಂದು ಹೋದ 8 ಮಂದಿಯ ಉಸಿರಾಟ ಕೂಡ ಏರುಪೇರಾಗಿದೆ ಎನ್ನಲಾಗಿದೆ.

ಕಾರ್ಖಾನೆಗೆ ವಿವಿಧೆಡೆಯಿಂದ ಬರುವ ಮೀನಿನ ತ್ಯಾಜ್ಯವನ್ನು ಈ ಬೃಹತ್ ಟ್ಯಾಂಕ್​ನಲ್ಲಿ ಮೊದಲು ಇರಿಸಿ, ಶುದ್ಧೀಕರಿಸಲಾಗುತ್ತಿತ್ತು. ಇದು ಸುಮಾರು 20 ಅಡಿ ಆಳವಾಗಿದೆ.

ಮೀನಿನ ತ್ಯಾಜ್ಯವನ್ನು ಸಂಸ್ಕರಿಸುವಾಗ ಬಳಕೆ ಮಾಡುವ ವಿಷಾನಿಲ ಸೋರಿಕೆಯಿಂದ ಈ ದುರ್ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ. ಅವಘಡ ನಡೆದ ಹಿನ್ನಲೆಯಲ್ಲಿ ಫ್ಯಾಕ್ಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರುಚಿಕರವಾದ ಮಾವಿನಹಣ್ಣಿನ ಹಲ್ವಾ!

Mon Apr 18 , 2022
ಮಾವಿನಹಣ್ಣು ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಈಗ ಎಲ್ಲಾ ಕಡೆ ಮಾವಿನಹಣ್ಣು ಸಿಗುತ್ತದೆ. ಹಾಗಾಗಿ ರುಚಿಕರವಾದ ಮಾವಿನಹಣ್ಣಿನ ಹಲ್ವಾ ಮಾಡಿಕೊಂಡು ಮನೆಮಂದಿಯೆಲ್ಲಾ ಸವಿಯಿರಿ. ಬೇಕಾಗುವ ಸಾಮಾಗ್ರಿಗಳು: 350 ಗ್ರಾಂ ಮಾವಿನಹಣ್ಣು, ½ ಕಾರ್ನ್ ಫ್ಲೋರ್, 1 ಕಪ್-ನೀರು, ¾ ಕಪ್-ಸಕ್ಕರೆ, 6 ಟೇಬಲ್ ಸ್ಪೂನ್-ತುಪ್ಪ, ¼ ಟೀ ಸ್ಪೂನ್-ಏಲಕ್ಕಿ ಪುಡಿ, ¼ ಕಪ್- ತೆಂಗಿನ ತುರಿ. ಮಾಡುವ ವಿಧಾನ: ಮೊದಲಿಗೆ ಮಾವಿನಹಣ್ಣಿನ ತಿರುಳನ್ನು ತೆಗೆದುಕೊಂಡು ಒಂದು ಮಿಕ್ಸಿ ಜಾರಿನಲ್ಲಿ […]

Advertisement

Wordpress Social Share Plugin powered by Ultimatelysocial