ಮಂಗಳೂರು : ಯುವಕನಿಗೆ ದುಷ್ಕರ್ಮಿಗಳ ತಂಡ ಚಾಕು ಇರಿದು ಕೊಂದ ಘಟನೆ

ಮಂಗಳೂರು ನಗರದ ಹೊರವಲಯದ
ಮೂಡ ಮಾರುಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಬಟ್ಟೆ ಅಂಗಡಿಯಲ್ಲಿದ್ದ ಯುವಕನ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ.
ಸುರತ್ಕಲ್ ಬೀಜೇಶ್‌ ಎಂಬ ಜವಳಿ ಅಂಗಡಿಯ ಮುಂಭಾಗ ಇಂದು ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಫಾಝಿಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರಿನಲ್ಲಿ:ಗುರುವಾರ ರಾತ್ರಿ ನಡೆದ ಕೊಲೆ ಪ್ರಕರಣ!

Fri Jul 29 , 2022
ಮಂಗಳೂರು ನಗರದ ಹೊರವಲಯದ ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಪ್ರಕರಣ ಸಂಬಂಧ  ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು,ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿ ಬರುವಂತೆ  ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಶನಿವಾರ ಮುಂಜಾನೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು,ಸಾರ್ವಜನಿಕರು ಸಹಕರಿಸಲು ಮನವಿ ಮಾಡಿದ್ದಾರೆ. ಜೊತೆಗೆ ಗಡಿ ಪ್ರದೇಶಗಳನ್ನು ಸೇರಿಸಿ ಕಮಿಷನರೇಟ್ […]

Advertisement

Wordpress Social Share Plugin powered by Ultimatelysocial