ಯುವತಿಯನ್ನು 16 ಸಲ ಚುಚ್ಚಿ ಚುಚ್ಚಿ ಕೊಂದ ಹುಚ್ಚುಪ್ರೇಮಿ!;

ಬೆಂಗಳೂರು: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ.

ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್​ ಎಂಬಾತ ಕೊಲೆ ಮಾಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಮುರುಗೇಶ್​ಪಾಳ್ಯದಲ್ಲಿ ಈ ಪ್ರಕರಣ ನಡೆದಿದೆ. ಲೀಲಾ ಪವಿತ್ರ (26) ಕೊಲೆಯಾದ ಯುವತಿ. ಆಂಧ್ರಪ್ರದೇಶ ಮೂಲದ ಈಕೆ ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇಂದು ಕೆಲಸ ಮುಗಿಸಿ ಹೊರಗಡೆ ಬಂದಾಗ ಆರೋಪಿ ಈಕೆಯ ಕೊಲೆ ಮಾಡಿದ್ದಾನೆ.

ಮುರಗೇಶ್ ಪಾಳ್ಯದ ಎನ್​ಎಎಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಎದೆ, ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಒಟ್ಟು ಸುಮಾರು 16 ಸಲ ಇರಿದು ಕೊಲೆ ಮಾಡಿರುವ ಆರೋಪಿ ಈಗ ಪೊಲೀಸರ ವಶದಲ್ಲಿದ್ದಾನೆ. ಜೀವನ್​ಬಿಮಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ಇಬ್ಬರೂ ಐದು ವರ್ಷಗಳಿಂದ ಪ್ರೀತಿಸುತ್ತಿದ್ದು, ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧವಿತ್ತು. ಅದೇ ಕಾರಣಕ್ಕೆ ಯುವತಿ ಯುವಕನಿಂದ ಅಂತರ ಕಾಯ್ದುಕೊಂಡಿದ್ದಳು. ಇದರಿಂದ ಬೇಸತ್ತ ಯುವಕ ಈ ಕೃತ್ಯ ಎಸಗಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ.

Wed Mar 1 , 2023
  ತಿಂಡಿ ಖರೀದಿಸುವ ಜೊತೆಗೆ ಫೋನ್‌ಗಳನ್ನು ಚಾರ್ಜ್ ಮಾಡುವುದು, ಬಸ್ ಮಾರ್ಗಗಳು, ಸಮಯ ಪರಿಶೀಲನೆ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿರುವ ಸ್ಮಾರ್ಟ್ ಬಸ್ ನಿಲ್ದಾಣ ಹೊಂದಿದೆ .ಎಲೆಕ್ರಾನಿಕ್ ಸಿಟಿ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ಇನ್ಫೋಸಿಸ್ ಅವೆನ್ಯೂ ಬಳಿಯ ವಿಮಾನ ನಿಲ್ದಾಣದ ಬಸ್ ಟರ್ಮಿನಸ್‌ನಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ ಲೋಕಾರ್ಪಣೆ ಮಾಡಿದೆ.ಬೆಂಗಳೂರಿನಲ್ಲಿ ಮೊದಲ ಬಾರಿಗೆ,ಈ ಮಾದರಿಯ ಬಸ್ ನಿಲ್ದಾಣವನ್ನು ಅರಂಭಿಸಲಾಗಿದೆ. ತಿಂಡಿಗಳು ಮತ್ತು ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮಾರಾಟ ಯಂತ್ರಗಳು, ಫೋನ್‌ಗಳು […]

Advertisement

Wordpress Social Share Plugin powered by Ultimatelysocial