ಪ್ರಧಾನಿ ನರೇಂದ್ರ ಮೋದಿ ಅವರು 75ನೇ ʼಮನ್ ಕಿ ಬಾತ್ʼ ರೇಡಿಯೋ ಕಾರ್ಯಕ್ರಮ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಕಳೆದ ವರ್ಷ ಇದೇ ತಿಂಗಳು ನಡೆದ ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ, ಸ್ವಾತಂತ್ರ್ಯ ಹೋರಾಟದಲ್ಲಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರು ಸದಾ ಪ್ರೇರಣೆಯಾಗಿ ಉಳಿದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಇನ್ನು ಇದೇ ತಿಂಗಳಲ್ಲಿ ಸ್ವಾತಂತ್ರ್ಯ ಬಂದ 75ನೇ ವರ್ಷದ ಅಮೃತ ಮಹೋತ್ಸವವನ್ನು ಆರಂಭಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ.
ಇದನ್ನೂ ಓದಿ: ಶವ ಸಂಸ್ಕಾರಕ್ಕೆಂದು ತೆರಳಿದ್ದವಳೇ ಶವವಾದಳು.!