ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಗುರುವೈಭವೋತ್ಸವ ಹಿನ್ನೆಲೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ನಟಿ ರಚಿತಾರಾಮ್ ಸೇರಿದಂತೆ ಹಲವು ಗಣ್ಯರಿಗೆ ಗುರುವೈಭವೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ರಾಯರ ಪಟ್ಟಾಭಿಷೇಕ ಹಾಗೂ ಜನ್ಮದಿನ ನಿಮಿತ್ತ ಆರುದಿನಗಳ ಕಾಲ ಆಚರಿಸುವ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರತೀವರ್ಷ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.ಅಂತೆಯೇ ಈ ವರ್ಷದ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ನಟ ಜಗ್ಗೇಶ್ ದಂಪತಿ ಹಾಗೂ ರಚಿತಾರಾಮ್ಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.ಇದಕ್ಕೂ ಮೊದಲು ದಂಪತಿ ಸಮೇತವಾಗಿ ರಾಯರ ಮೂಲವೃಂದಾವನ ದರ್ಶನ ಪಡೆದ ಜಗ್ಗೇಶ್ ವಿಶೇಷ ಪೂಜೆ ಸಲ್ಲಿಸಿದರು. ನಟಿ ರಚಿತಾ ರಾಮ್ ಒಂದೇ ದಿನ ಮೂರು ಬಾರಿ ರಾಯರ ವೃಂದಾವನ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada