ಭಾರತದಲ್ಲಿ ಅನೇಕ ರೀತಿಯ ಮಸಾಲೆಗಳನ್ನು ಅಡುಗೆಗೆ ಬಳಸಲಾಗುತ್ತದೆ. ಮಸಾಲೆಗಳನ್ನು ಬಳಸಿ ಅಡುಗೆಯನ್ನು ರುಚಿಕರವಾಗಿಸುವುದಲ್ಲದೆ, ಆರೋಗ್ಯಕ್ಕೂ ಪ್ರಯೋಜನವನ್ನು ನೀಡುತ್ತದೆ. ಮಸಾಲೆಗಳನ್ನು ಬಳಸುವುದು ಕೆಲವೊಮ್ಮೆ ಜೀರ್ಣಕ್ರಿಯೆಯನ್ನು ಹಾನಿಗೊಳಿಸುತ್ತದೆ.
ಈ ಕಾರಣದಿಂದಾಗಿ ಹೆಚ್ಚಿನ ವೈದ್ಯರು ಮಸಾಲೆಯುಕ್ತ ಆಹಾರವನ್ನು ಸೇವಿಸದಂತೆ ಸಲಹೆ ನೀಡುತ್ತಾರೆ. ಆದರೆ ಕೆಲವು ಮಸಾಲೆಗಳನ್ನು ಆಹಾರದಲ್ಲಿ ಬಳಸಲೇಬೇಕು. ಈ ಮಸಾಲೆಗಳನ್ನು ಬಳಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ.
ಅಡುಗೆ ಮಾಡುವಾಗ ಈ ಮಸಾಲೆಯನ್ನು ಖಂಡಿತವಾಗಿಯೂ ಬಳಸಿ :
ಜೀರಿಗೆ :
ಜೀರಿಗೆ ಬಳಕೆಯಿಂದಆಹಾರದ ಘಮ ಹೆಚ್ಚುವುದು ಮಾತ್ರವಲ್ಲ, ರುಚಿಯೂ ಹೆಚ್ಚುತ್ತದೆ. ಇದರೊಂದಿಗೆ ಜೀರಿಗೆಯು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ಯಾವುದೇ ರೀತಿಯ ಅಡುಗೆ ಮಾಡಿದರೂ ಅದರಲ್ಲಿ ಜೀರಿಗೆ ಸೇರಿಸುವುದನ್ನು ಮರೆಯಬೇಡಿ.
ಓಮ ಕಾಳು :
ಓಮ ಕಾಳು ಹೊಟ್ಟೆಯ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ತೂಕವನ್ನು ಕಡಿಮೆ ಮಾಡಲು ಮತ್ತು ಶೀತದಿಂದ ಪರಿಹಾರಕ್ಕಾಗಿ ಓಮ ಕಾಳನ್ನು ಬಳಸಲಾಗುತ್ತದೆ. ಯಾವುದೇ ಮಸಾಲೆಯುಕ್ತ ಆಹಾರವನ್ನು ತಯಾರಿಸುತ್ತಿದ್ದರೆ, ಅದರಲ್ಲಿ ಒಮಕಾಳನ್ನು ಸೇರಿಸಿ. ಇದು ಎಲ್ಲಾ ರೀತಿಯ ಮಸಾಲೆಗಳು ಮತ್ತು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.
ಇಂಗು :
ಇಂಗನ್ನು ಬೇಳೆಯಿಂದ ಹಿಡಿದು, ಎಲ್ಲಾ ಅಡುಗೆಗಳಲ್ಲಿಯೂ ಬಳಸಲಾಗುತ್ತದೆ. ಹೊಟ್ಟೆ ನೋವು, ಗ್ಯಾಸ್, ಅಜೀರ್ಣದಂತಹ ಸಮಸ್ಯೆಗಳನ್ನು ತೊಡೆದು ಹಾಕಲು ಇಂಗು ಸಹಾಯ ಮಾಡುತ್ತದೆ. ಹೊಟ್ಟೆಯ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ರೀತಿಯ ಅಡುಗೆಯಲ್ಲಿ ಇಂಗನ್ನು ಬಳಸಿ.
ಸೋಂಫು :
ಸೋಂಫನ್ನುಅನೇಕ ರೀತಿಯ ಅಡುಗೆಯಲ್ಲಿ ಬಳಸಲಾಗುತ್ತದೆ. ಈ ಮಸಾಲೆ ಅಡುಗೆಯ ರುಚಿಯನ್ನು ಹೆಚ್ಚಿಸುವುದಲ್ಲದೆ, ಜೀರ್ಣ ಕ್ರಿಯೆಯನ್ನು ಕೂಡಾ ಸುಧಾರಿಸುತ್ತದೆ. ಅದಕ್ಕಾಗಿಯೇಪ್ರತಿ ಅಡುಗೆಯಲ್ಲಿ ಇಂಗನ್ನು ಬಳಸುವಂತೆ ಸೂಚಿಸಲಾಗುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada