ಅಡೂರು: ಮದುವೆಯಾಗಿ ಮೊದಲ ರಾತ್ರಿಯ ಬಳಿಕ ವಧುವಿನ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ಕದ್ದು ಪರಾರಿಯಾಗಿದ್ದ ವರನನ್ನು ಪೊಲೀಸರು ಬಂಧಿಸಿದ್ದಾರೆ.ಕೇರಳದ ಕಾಯಂಕುಲಂ ನಿವಾಸಿ ಅಜರುದ್ದೀನ್ ರಶೀದ್ (30) ಎಂಬಾತನನ್ನು ಕೇರಳದ ಅಡೂರು ಪೊಲೀಸರು ಬಂಧಿಸಿದ್ದು, 30 ಸವರನ್ ಚಿನ್ನ ಮತ್ತು 2.75 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅಜರುದ್ದೀನ್ ಪಹಕುಲಂ ಮೂಲದ ಮಹಿಳೆಯನ್ನು ಜನವರಿ 30ರಂದು ಎಸ್.ಎಚ್.ಆಡಿಟೋರಿಯಂನಲ್ಲಿ ಮದುವೆಯಾಗಿದ್ದ. ಸಂಪ್ರದಾಯದಂತೆ ವಧುವಿನ ಮನೆಯುಲ್ಲಿ ಮೊದಲ ರಾತ್ರಿ ನಡೆದಿತ್ತು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ನೇಹಿತನಿಗೆ ಅಪಘಾತವಾಗಿದೆ ಎಂದು ಅಜರುದ್ದೀನ್ ಮನೆ ಬಿಟ್ಟಿದ್ದಾನೆ.ಇದಾದ ಬಳಿಕ ಆತನಿಗೆ ಫೋನ್ ಮಾಡಿದರೆ ಸ್ವಿಚ್ ಆಫ್ ಅಂತಾ ಕೇಳಿಬಂದಿದೆ. ಇದೇ ಸಂದರ್ಭದಲ್ಲಿ ವಧುವಿನ ಮನೆಯಲ್ಲಿ 30 ಸವರನ್ ಚಿನ್ನ ಮತ್ತು 2.75 ಲಕ್ಷ ರೂ. ಹಣ ಕಾಣೆಯಾಗಿರುವುದು ತಿಳಿಯುತ್ತದೆ. ಇದರಿಂದ ಅನುಮಾನಗೊಂಡ ವಧುವಿನ ಮನೆಯವರು ತಕ್ಷಣ ದೂರು ಸಹ ದಾಖಲಿಸುತ್ತಾರೆ.ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿಯುವ ಅಡೂರು ಪೊಲೀಸರಿಗೆ ಆರೋಪಿ ಅಜರುದ್ದೀನ್ ಕುರಿತು ಸ್ಫೋಟಕ ಸಂಗತಿಯೊಂದು ತಿಳಿಯುತ್ತದೆ. ಎರಡು ವರ್ಷಗಳ ಹಿಂದೆ ಅಲಪ್ಪುಳದ ಚೆಪ್ಪಾಡ್ ಎಂಬಲ್ಲಿ ಯುವತಿಯೊಬ್ಬಳನ್ನುಮದುವೆಯಾಗಿದ್ದ ಎಂಬ ಸಂಗತಿ ಬಯಲಾಗುತ್ತದೆ. ಆತ ಮೊದಲ ಪತ್ನಿಯೊಂದಿಗೆ ಇದ್ದಾನೆ ಎಂಬ ಮಾಹಿತಿ ತಿಳಿದ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಆತನನ್ನು ಬಂಧಿಸಿದ್ದು, ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಇತ್ತ ಘನ ಘೋರ ಸತ್ಯ ತಿಳಿದ ವಧು ಮದುವೆ ಆರಂಭದಲ್ಲೇ ಈ ರೀತಿ ಆಯ್ತಲ್ಲ ಅಂತಾ ಆಘಾತಕ್ಕೆ ಒಳಗಾಗಿದ್ದಾಳೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada