ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿದ್ದ ಮಸೀದಿ ತೆರವು ̤

ಬೆಂಗಳೂರು: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್ಫಾರಂ 5 ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ.ವಿಶ್ರಾಂತಿ ಕೊಠಡಿಯನ್ನು ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡಲಾಗುತ್ತಿತ್ತು.ಮಸೀದಿ ತೆರವುಗೊಳಿಸಿ ನೌಕರರ ವಿಶ್ರಾಂತಿ ಗೃಹಕ್ಕೆ ಮೀಸಲಿಡಲಾಗಿದೆ. ಹಿಂದೂ ಪರ ಸಂಘಟನೆಗಳಿಂದ ದೂರು ಹಿನ್ನೆಲೆಯಲ್ಲಿ ಮಸೀದಿ ತೆರವುಗೊಳಿಸಲಾಗಿದೆ. ವಿಶ್ರಾಂತಿ ಗೃಹದಲ್ಲಿ ಇದ್ದ ಉರ್ದು ಭಾಷೆಯ ನಾಮಫಲಕವನ್ನು ತೆರವು ಮಾಡಲಾಗಿದೆ.ರೈಲು ನಿಲ್ದಾಣದಲ್ಲಿ ಮಸೀದಿ ನಿರ್ಮಿಸಿ ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SANDALWOOD:'ಓಲ್ಡ್ ಮಾಂಕ್' ಚಿತ್ರ ಬರ್ತಿದೆ,ಮತ್ತೆ ಸಿನಿಮಾ ಮುಂದೋಡೋ ಚಾನ್ಸೇ ಇಲ್ಲ;

Wed Feb 2 , 2022
ಶ್ರೀನಿ ನಾಯಕರಾಗಿ ನಟಿಸಿ ನಿರ್ದೇಶಿಸಿರುವ ಓಲ್ಡ್ ಮಾಂಕ್ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಅದರಂತೆ ಫೆ.25ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಹಿಂದೆ ಓಲ್ಡ್ ಮಾಂಕ್ ಸಿನಿಮಾ ಫೆ.11ರಂದು ಬಿಡುಗಡೆಯಾಗುವುದಾಗಿ ಹೇಳಲಾಗಿತ್ತು. ಇದೀಗ ಸಿನಿಮಾ ದಿನಾಂಕ ಮುಂದೂಡಲ್ಪಟ್ಟಿದ್ದು, ಫೆ.25ರಂದು ಬಿಡುಗಡೆ ಕಾಣುತ್ತಿದೆ. ಇನ್ನುಮುಂದೆ ಬಿಡುಗಡೆ ದಿನಾಂಕವನ್ನು ಮುಂದೂಡುವುದಿಲ್ಲ ಎಂದು ಚಿತ್ರತಂಡ ಹೇಳಿಕೊಂಡಿದೆ. ಏನೇ ಆದರೂ ಫೆ.25ರಂದು ಪ್ರೇಕ್ಷಕರ ಮುಂದೆ ಓಲ್ಡ್ ಮಾಂಕ್ ಬರಲಿದೆ ಎಂದು ಅವರು ಹೇಳಿದ್ದಾರೆ. ಕೆ.ಪಿ ಶ್ರೀಕಾಂತ್ […]

Advertisement

Wordpress Social Share Plugin powered by Ultimatelysocial