ಮಾಸ್ಕ್ ಹಾಕಿಯೇ ಓಡಾಡಿ: ಮತ್ತೆ ಕಟ್ಟುನಿಟ್ಟಿನ ನಿಯಮ ಜಾರಿ

ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವಾರು ಕ್ರಮಗಳನ್ನು ಪ್ರಕಟಿಸಿದ್ದಾರೆ. ಇದರನ್ವಯ ಈ ಹಿಂದಿನಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಸರ್ಕಾರದ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಶ್ವದ ವಿವಿಧ ದೇಶಗಳಲ್ಲಿನ ಕೋವಿಡ್ ಸಾಂಕ್ರಾಮಿಕದ ಅಂಕಿ ಅಂಶಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದುಕೊಂಡರು.

ಕೋವಿಡ್ ಮತ್ತೆ ಕಾಣಿಸಿಕೊಳ್ಳುವ ಭೀತಿ ಇರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಈ ಹಿಂದಿನಂತೆಯೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ.

ಅದೇ ರೀತಿ, 2 ಅಡಿಗಳಷ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಪ್ರಕರಣಗಳ ಸಂಖ್ಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವುದಕ್ಕೆ ಸೂಚನೆ ನೀಡಲಾಗಿದೆ.

ಇನ್ನು ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಪಾನ್ ಮತ್ತು ಥೈಲ್ಯಾಂಡ್ ನಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಟೆಲಿ ಮಾನಿಟರಿಂಗ್ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವುದನ್ನು ಹೆಚ್ವಿಸಲು ಪ್ರಚಾರ, ಮಾಹಿತಿ, ಶಿಕ್ಷಣ ಕಾರ್ಯಕ್ರಮವನ್ನು
ತೀವ್ರಗೊಳಿಸಲು ಸರ್ಕಾರ ನಿರ್ಧರಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರಿಡುವಂತೆ ಒತ್ತಾಯವಿದೆ?

Tue Apr 26 , 2022
  ಶಿವಮೊಗ್ಗ, ಏಪ್ರಿಲ್ 25: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಅತ್ಯಂತ ವೇಗವಾಗಿ ನಡೆಯುತ್ತಿದೆ. ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು ಈ ಮಧ್ಯೆ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ಕ್ಯಾಬಿನೆಟ್‌ನಲ್ಲಿ ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೂ ಶಿಫಾರಸು ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. […]

Advertisement

Wordpress Social Share Plugin powered by Ultimatelysocial