ರಾಜ್ಯ ಸರ್ಕಾರ ಫೆಬ್ರವರಿ 17 ರಂದು ಮಂಡಿಸಿದ ಬಜೆಟ್ ನಲ್ಲಿ ಕೋಲಾರ ಜಿಲ್ಲೆಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಕೋಲಾರ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಫೆಬ್ರವರಿ 21ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪಾತಕೋಟೆ ನವೀನ್ ಕುಮಾರ್ ಕೋಲಾರ ಜಿಲ್ಲೆಗೆ ಶಿಕ್ಷಣ,ಆರೋಗ್ಯ ಜೊತೆಗೆ ಕೃಷಿ ಆಧಾರಿತ ಕಂಪನಿಗಳನ್ನು ತರುವಂತೆ ಒತ್ತಾಯಿಸಿ ಹಲವಾರು ಬಾರಿ ರಾಜ್ಯ ಸರ್ಕಾರಕ್ಕೆ ಹಾಗೂ ಸ್ಥಳೀಯ ಶಾಸಕರು ಸಂಸದರಿಗೆ ಮನವಿ ಮಾಡಿದ್ದರು ಸಹ ಈ ಬಜೆಟ್ ನಲ್ಲಿ ಯಾವುದೇ ವಿಚಾರಗಳು ಬಜೆಟ್ ನಲ್ಲಿ ಇಲ್ಲದಿರುವ ಕಾರಣದಿಂದಾಗಿ ಇದೇ 21ರಂದು ಮಂಗಳವಾರ ಮುಂಜಾನೆ 11ಘಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೋಲಾರ ಜಿಲ್ಲಾ ಅಭಿವೃದ್ಧಿಗಾಗಿ ಜನಪರ ವೇದಿಕೆ ವತಿಯಿಂದ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಲು ಮನವಿ ಮಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada