ನಿನ್ನೆ ಕಾಂಗ್ರೆಸ್ ಪಾದಯಾತ್ರೆ ಯನ್ನು ನಿಲ್ಲಿಸಲು ಸರ್ಕಾರ ಆದೇಶ ನೀಡಿತ್ತು. ಕಾಂಗ್ರೆಸ್ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದೆ. ಕೊರೋನಾ ಸಂದಿಗ್ಧ ಕಾಲದಲ್ಲಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಂಡಿಲ್ಲ ಅಂತ ನಿನ್ನೆ ಹೈಕೋರ್ಟ್, ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಇಂದು ಕೂಡಾ ಪಾದಯಾತ್ರೆ ಮುಂದುವರಿಸುತ್ತೇವೆ ಎನ್ನುವ ಹೇಳಿಕೆಗಳನ್ನ ನೀಡಿದ್ದರು. ಅಲ್ಲದೇ ಕೆಪಿಸಿಸಿ ಅಧ್ಷಕ್ಷ ಡಿಕೆ ಶಿವಕುಮಾರ್ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ. 5ನೇ ದಿನದ ಪಾದಯಾತ್ರೆ ಕೂಡ ಆರಂಭವಾಗಿದೆ. ಮತ್ತೊಂದೆಡೆ ಈ ಪಾದಯಾತ್ರೆಯಲ್ಲಿ ಭಾಗಿಯಾದವರಲ್ಲಿ ಕೋವಿಡ್ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ.ಈ ನಡುವೆ ಪಾದಯಾತ್ರೆ ನಿಲ್ಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಯಾಗಿರುವ ಸೋನಿಯಾ ಗಾಂಧಿ ಸೂಚನೆ ಯನ್ನು ನೀಡೀದ್ದಾರೆ..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada