ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯನ್ನು ಧ್ವಂಸ ಮಾಡಿರುವ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ಯುವ ವೇದಿಯಿಂದ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಸಮಾವೇಶಗೊಂಡ ಕುರುಬ ಸಮಾಜದ ಮುಖಂಡರುಗಳು ರಾಜ್ಯಾಧ್ಯಕ್ಷ ರಾಜಶೇಖರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯನ್ನು ದ್ವಂಸ ಗೊಳಿಸಿರುವ ಎಂ.ಇ.ಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಆಗ್ರಹಿಸಲಾಯಿತು.ಪ್ರತಿಭಟನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಜಗಜ್ಯೋತಿ ಬಸವೇಶ್ವರ, ನಟ ಪುನೀತ್ ರಾಜ್ ಕುಮಾರ್ ಹಾಗೂ ಸಂಗೊಳ್ಳಿ ರಾಯಣ್ಣರವರ ಭಾವಚಿತ್ರದೊಂದಿಗೆ ಮೆರವಣಿಗೆ ಸಾಗಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada