‘ಮಿಲನ’ ಬೆಡಗಿ ಪಾರ್ವತಿಗೆ ಕಿರುಕುಳ: ಆಹಾರ ಪೊಟ್ಟಣ ತರುತ್ತಿದ್ದವ ಕೊನೆಗೂ ಸಿಕ್ಕಬಿದ್ದ!

'ಮಿಲನ' ಬೆಡಗಿ ಪಾರ್ವತಿಗೆ ಕಿರುಕುಳ: ಆಹಾರ ಪೊಟ್ಟಣ ತರುತ್ತಿದ್ದವ ಕೊನೆಗೂ ಸಿಕ್ಕಬಿದ್ದ!

ತಿರುವನಂತಪುರ: ಆಹಾರ ಪೊಟ್ಟಣಗಳನ್ನು ಹೊತ್ತು ಮನೆಗೆ ಭೇಟಿ ನೀಡುತ್ತ ಬಹುಭಾಷಾ ತಾರೆ ಪಾರ್ವತಿ ತಿರುವೋತುಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.

ನಟಿಯನ್ನು ಹಿಂಬಾಲಿಸಿ, ಆಕೆಯ ಮನೆಗೆ ಬರುವುದೂ ಅಲ್ಲದೇ, ನಟಿಗೆ ನಿರಂತರ ಫೋನ್ ಕರೆಗಳ ಮೂಲಕ ಕಿರುಕುಳ ನೀಡುತ್ತಿದ್ದ ಕೊಲ್ಲಂ ಮೂಲದ ಅಫ್ಸಲ್‌ನನ್ನು (34) ಪೊಲೀಸರು ಬಂಧಿಸಿದ್ದಾರೆ.

ತಿಂಡಿ ಪೊಟ್ಟಣವೆಲ್ಲಾ ತಮಗೆ ಬೇಡ ಎಂದು ಹಲವು ಬಾರಿ ಈತನಿಗೆ ಪಾರ್ವತಿ ಹೇಳಿದ್ದರೂ ಪುನಃ ಪುನಃ ಅದನ್ನು ತರುವ ನೆಪದಲ್ಲಿ ಮನೆಗೆ ಭೇಟಿ ನೀಡುತ್ತಿದ್ದ. ಅಲ್ಲಿರುವ ಭದ್ರತಾ ಸಿಬ್ಬಂದಿ ಜತೆ ಕ್ಯಾತೆ ತೆಗೆದು ಒಳಗೆ ನುಗ್ಗುತ್ತಿದ್ದ. ಈತನ ವಿರುದ್ಧ ಈ ಹಿಂದೆಯೇ ನಟಿ ದೂರು ದಾಖಲಿಸಿದ್ದರು. ಅಂತೂ ಆತನನ್ನು ಈಗ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರ ಮೇಲೆ ನಾನಾ ವಿಧದಲ್ಲಿ ಆಗುತ್ತಿರುವ ದೌರ್ಜನ್ಯದ ಕುರಿತು ಪಾರ್ವತಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದರು.

ಮಲಯಾಳಿ ನಟಿಯಾಗಿರುವ ಪಾರ್ವತಿ, ಕನ್ನಡದಲ್ಲಿಯೂ ನಟಿಸಿದ್ದಾರೆ. ಪುನೀತ್‌ ರಾಜ್‌ಕುಮಾರ್‌ ಜತೆ ಮಿಲನ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೂ ಅಲ್ಲದೇ ‘ಪೃಥ್ವಿ’, ‘ಮಳೆ ಬರಲಿ ಮಂಜೂ ಇರಲಿ’, ‘ಅಂದರ್ ಬಾಹರ್’ ಮೊದಲಾದ ಚಿತ್ರಗಳಲ್ಲಿ ನಾಯಕಿಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಮಿಕ್ರಾನ್' ಭೀತಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೈಅಲರ್ಟ್..!

Wed Dec 22 , 2021
ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ವೇಷ ಬದಲಿಸಿಕೊಂಡು ಮತ್ತಷ್ಟು ಪ್ರಬಲವಾಗುತ್ತಿದೆ. ಒಂದು ಕಡೆ ವೈರಸ್ ಕಂಟ್ರೋಲ್ ಮಾಡಲು ವ್ಯಾಕ್ಸಿನ್ ಕೊಟ್ಟಿದ್ದರೆ, ಮತ್ತೊಂದು ಕಡೆ ಕೊರೊನಾ ರೂಪಾಂತರಿಗಳು ಈ ವ್ಯಾಕ್ಸಿನ್ ಕೋಟೆಯನ್ನೇ ಛಿದ್ರಗೊಳಿಸುತ್ತಿವೆ. ಅದರಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮಿಕ್ರಾನ್ ಕೇಸ್ ಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ‘ಒಮಿಕ್ರಾನ್’ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಬಿಬಿಎಂಪಿ  ಫುಲ್ ಅಲರ್ಟ್ ಆಗಿದೆ. ಕೇಂದ್ರ ಸರ್ಕಾರದ ವರದಿ ನೋಡಿ ಬಿಬಿಎಂಪಿ ಕಮಿಷನರ್ ಆಯಕ್ಟಿವ್ […]

Advertisement

Wordpress Social Share Plugin powered by Ultimatelysocial