ಹಾಲು ಉತ್ಪಾದಕರು, ಕುರಿಗಾಹಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

 

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸುವ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ.ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಕಲ್ಪಿಸಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮತ್ತು ಗೋವು ಉತ್ಪನ್ನಗಳ ಮಾರಾಟಕ್ಕೆ ಗೋ ಮಾತಾ ಸಹಕಾರ ಸಂಘ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ.ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕಿಗೆ ಕೆಎಂಎಫ್ ಮತ್ತು ಜಿಲ್ಲಾ ಹಾಲು ಒಕ್ಕೂಟಗಳಿಂದ 260 ಕೋಟಿ ರೂಪಾಯಿ ಮತ್ತು ರಾಜ್ಯ ಸರ್ಕಾರದಿಂದ 100 ಕೋಟಿ ರೂಪಾಯಿ ಷೇರು ಬಂಡವಾಳ ಒದಗಿಸಲಾಗುತ್ತದೆ. ಗೋ ಉತ್ಪನ್ನಗಳ ತಾಂತ್ರಿಕತೆ ಹಾಗೂ ಪ್ರಮಾಣೀಕರಣದ ಅಭಿವೃದ್ಧಿಗೆ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ಕೋಶ ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ.

ಅನುಗ್ರಹ ಕೊಡುಗೆ ಯೋಜನೆಯಡಿ ಆಕಸ್ಮಿಕವಾಗಿ ಮೃತಪಟ್ಟ ಮೂರರಿಂದ ಆರು ತಿಂಗಳ ಕುರಿ, ಮೇಕೆಗಳಿಗೆ 3500 ರೂ. ಪರಿಹಾರ ನೀಡಲಾಗುವುದು. ಕುರಿ, ಮೇಕೆ ಸಾಕಾಣಿಕೆದಾರರು, ವಲಸೆ ಕುರಿಗಾರರು ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ ಕುರಿಗಾಹಿಗಳಿಗೆ 5 ಲಕ್ಷ ರೂ. ವಿಮೆ ಸೌಲಭ್ಯ ಒದಗಿಸಲಾಗುವುದು. ಆರ್ಥಿಕವಾಗಿ ಹಿಂದುಳಿದ ಕುರಿಗಾರರಿಗೆ ವಸತಿ ಸೌಲಭ್ಯಕ್ಕೆ, ಕುರಿದೊಡ್ಡಿ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಕ್ರೇನ್‌ನಿಂದ ವಾಪಸಾದ ದಾವಣಗೆರೆಯ ವಿನಯ್

Sat Mar 5 , 2022
ದಾವಣಗೆರೆ: ‘ನಾವು ತಾಯ್ನಾಡಿಗೆ ಹೊರಟಾಗ ನೀವು ಆರಾಮವಾಗಿ ಹೋಗಿ, ನಾವು ನಿಮ್ಮ ಹಿಂದೆ ಬರುತ್ತೇವೆ ಎಂದು ಧೈರ್ಯ ತುಂಬಿದ್ದ ನವೀನ್ ಗ್ಯಾನಗೌಡರ್ ಸಾವಿನ ಸುದ್ದಿ ಕೇಳಿ ಆಘಾತವಾಯಿತು’.ಇದು ಉಕ್ರೇನ್‌ನಲ್ಲಿ ಉಕ್ರೇನ್‌ನಿಂದ ವಾಪಸ್‌ ಆಗಿರುವ ದಾವಣಗೆರೆಯ ವೈದ್ಯಕೀಯ ವಿದ್ಯಾರ್ಥಿ ವಿನಯ್ ಕಲ್ಲಿಹಾಳ್ ಅವರ ನುಡಿ.’ಪ್ರಥಮ ವರ್ಷದಲ್ಲಿ ಇಬ್ಬರು ಹಾಸ್ಟೆಲ್‌ನಲ್ಲಿದ್ದೆವು. ಎರಡು ವರ್ಷಗಳಿಂದ ಫ್ಲಾಟ್‌ನಲ್ಲೇ ಇದ್ದುದರಿಂದ ಸ್ನೇಹಿತರಾಗಿ ಇದ್ದೆವು. ನಾವು ರೈಲು ಹತ್ತಿದ ಎರಡು ಗಂಟೆಯ ಬಳಿಕ ನವೀನ್‌ ಸಾವಿನ ಸುದ್ದಿ ಕೇಳಿ ತುಂಬಾ […]

Advertisement

Wordpress Social Share Plugin powered by Ultimatelysocial