ಎಸ್‌ಟಿ ಎಸ್‌ ಸಿ ಮೀಸಲಾತಿ ಹೆಚ್ಚಳ ಬೆನ್ನಲ್ಲೇ ಇತರ ಸಮುದಾಯದಿಂದಲೂ ಬೇಡಿಕೆ

ಎಸ್‌ಟಿ ಎಸ್‌ ಸಿ ಮೀಸಲಾತಿ ಹೆಚ್ಚಳ ಬೆನ್ನಲ್ಲೇ ಇತರ ಸಮುದಾಯದಿಂದಲೂ ಮೀಸಲಾತಿಗಾಗಿ ಬೇಡಿಕೆ ತೀವ್ರಗೊಳ್ಳುತ್ತಿದೆ. ಮೀಸಲಾತಿ ನೀಡುವಂತೆ ಪಂಚಮಸಾಲಿಗಳು, ಒಕ್ಕಲಿಗರು ಮತ್ತೊಂದು ಕಡೆಯಲ್ಲಿ ಕುರುಬ ಸಮುದಾಯದವೂ ಬೇಡಿಕೆ ಇಡುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ಈ ಜಟಿಲ ಸಮಸ್ಯೆಯನ್ನು ಬಗೆಹರಿಸುವುದು ರಾಜ್ಯ ಸರ್ಕಾರ ಹಾಗೂ ಸಿಎಂ ಬಸವರಾಜ ಬೊಮ್ಮಾಯಿಗೂ ತಲೆನೋವಾಗಿ ಪರಿಣಮಿಸಿದೆ2 ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಡಿಸೆಂಬರ್ 19 ರ ಗಡುವು ನೀಡಲಾಗಿದೆ. ಡಿಸೆಂಬರ್ 19 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಇದಕ್ಕೂ ಮೊದಲು ಹಿಂದುಳಿದ ಆಯೋಗದಿಂದ ವರದಿಯನ್ನು ಪಡೆದುಕೊಳ್ಳಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ, ಡಿಸೆಂಬರ್ 22 ರಂದು ಬೆಳಗಾವಿಯಲ್ಲಿ ಬೃಹತ್ ಅಧಿವೇಶನವನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ.ಗುರುವಾರ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಸದ್ಯ ಸಿಎಂ ಕೊಟ್ಟ ಭರವಸೆ ಹಿನ್ನೆಲೆಯಲ್ಲಿ ವಿಧಾನಸೌಧ ಮುತ್ತಿಗೆಯನ್ನು ಮುಂದೂಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

 

Please follow and like us:

Leave a Reply

Your email address will not be published. Required fields are marked *

Next Post

ವಿರಾಟಪುರ ವಿರಾಗಿ ರಥಯಾತ್ರೆಗೆ ರಾಜ್ಯಾದ್ಯಂತ ಅಭೂತಪೂರ್ವ ಸ್ವಾಗತ!

Mon Dec 26 , 2022
ಕನ್ನಡ ನಾಡು ಕಂಡ, ಎರಡನೇ ಬಸವಣ್ಣ ಎಂದೇ ಭಕ್ತಾದಿಗಳಾ ಮನದಲ್ಲಿ ನೆಲೆಸಿರುವ ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ವಿರಾಟಪುರ ವಿರಾಗಿ ಸಿನಿಮಾದ ‘ರಥಯಾತ್ರೆ’ ರಾಜ್ಯದ ಆರು ದಿಕ್ಕುಗಳಲ್ಲಿ ಸಂಚರಿಸುತ್ತಿದೆ. ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಯಿಂದ ರಥಯಾತ್ರೆಗೆ ಚಾಲನೆ ನೀಡಿದ್ದರೆ, ಉಳಿದ ಐದು ಕಡೆಗಳಲ್ಲಿ ವಿವಿಧ ಮಠಾಧೀಶರು ರಥಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ರಥಯಾತ್ರೆಗೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ.ಹಾನಗಲ್ಲ ಶ್ರೀಗಳ ಭಕ್ತರು ಮತ್ತು ಕನ್ನಡ ಸಿನಿ ಪ್ರೇಮಿಗಳು […]

Advertisement

Wordpress Social Share Plugin powered by Ultimatelysocial