ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು

ಹೈದರಾಬಾದ್: ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಮತ್ತೊಂದು ಘಟನೆ ತೆಲಂಗಾಣದ ಮಹಬೂಬಾಬಾದ್ ನಲ್ಲಿ ಶುಕ್ರವಾರ ( ಫೆ.10 ರಂದು) ಸಂಜೆ ನಡೆದಿದೆ.

ಸಿಕಂದರಾಬಾದ್-ವಿಶಾಖಪಟ್ಟಣಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಕಿಟಕಿಯೊಂದಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ವೈಜಾಗ್‌ ತಲುಪಿದ ಬಳಿಕ ಎಷ್ಟು ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ದಕ್ಷಿಣ ಮಧ್ಯ ರೈಲ್ವೆಯ ಸಿಪಿಆರ್‌ಒ ರಾಕೇಶ್ ತಿಳಿಸಿದ್ದಾರೆ.

 ಕಳೆದ ತಿಂಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾರಂಭಿಸುವ ಮೊದಲು, ವಿಶಾಖಪಟ್ಟಣಂನ ರೈಲ್ವೆ ಯಾರ್ಡ್‌ನಲ್ಲಿ ಅಪರಿಚಿತ ವ್ಯಕ್ತಿಗಳು ರೈಲಿನ ಕೋಚ್‌ಗೆ ಕಲ್ಲು ತೂರಾಟ ನಡೆಸಿದ್ದರು, ಗಾಜಿನ ಕಿಟಕಿಯನ್ನು ಒಡೆದಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗುಬ್ಬಿ ಶಾಸಕ‌ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ‌ಸೇರ್ತಾರ...?

Sat Feb 11 , 2023
ಚುನಾವಣೆ ಹತ್ತಿರ ಬರುತ್ತಿರುವ ಬೆನ್ನಲೆ ಕಲ್ಪತರು ನಾಡು ತುಮಕೂರಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತ ಕಾರ್ಯಕರ್ತರ ಪಕ್ಷಾಂತರ ಪರ್ವ ನಡೆಯುತ್ತಿದೆ, ಇದರ ಬೆನ್ನಲ್ಲೆ ಗುಬ್ಬಿ ಜೆಡಿಎಸ್ ಉಚ್ಚಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೆ ಇದೀಗ ಮೂಲಗಳ ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಎಸ್.ಆರ್.ಶ್ರೀನಿವಾಸ್ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೆ ತುಮಕೂರು ಜಿಲ್ಲೆ ಗುಬ್ಬಿ‌ […]

Advertisement

Wordpress Social Share Plugin powered by Ultimatelysocial