ಜಾತ್ರೆಯಲ್ಲಿ ಚಿನ್ನಾಭರಣ ದೋಚಿದ್ದ ನಾಲ್ವರು ಕಳ್ಳಿಯರ ಬಂಧನ.

ಪಟ್ಟಣದಲ್ಲಿ ಇತ್ತೀಚೆಗೆ ಜರುಗಿದ ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಚಿನ್ನಾಭರಣ ದೋಚಿದ್ದ ನಾಲ್ವರು ಕಳ್ಳಿಯರನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯ ನಾಲ್ವರು ಮಹಿಳೆಯರನ್ನು ಬಂಧಿಸಿ 14 ಬಂಗಾರ ತಾಳಿ, 60 ಗುಂಡುಗಳು ಸೇರಿದಂತೆ 1.5 ಲಕ್ಷ ರೂಪಾಯಿ ಮೌಲ್ಯದ 35 ಗ್ರಾಂ.ಚಿನ್ನಾಭರಣ ಜಪ್ತಿ ಮಾಡಿಕೊಡಿ ಆರೋಪಿ ಮಹಿಳೆಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿದ್ದ 5-6 ಜನ ಮಹಿಳೆಯರು ಬಂಗಾರದ ಮಾಂಗಲ್ಯ ಕಳವಾದ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ನಾಲ್ವರು ಮಹಿಳೆಯರನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ.

Sun Jan 22 , 2023
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಶ್ರೀರಾಮಚಂದ್ರನ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಂತ ಸಾಹಿತಿ ಪ್ರೊ.ಕೆಎಸ್ ಭಗವಾನ್ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಂತ ಸಾಹಿತಿ ಪ್ರೊ.ಕೆಎಸ್ ಭಗವಾನ್ ಅವರು ಶ್ರೀರಾಮ ಮದ್ಯಸೇವನೆ ಮಾಡುತ್ತಿದ್ದ, ಸೀತೆಯನ್ನು ಕಾಡಿಗೆ ಬಿಟ್ಟಿದ್ದ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಭಗವಾನ್ ಹೇಳಿ ವಿರುದ್ಧ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಈ ಹಿನ್ನಲೆಯಲ್ಲಿ ಇಂದು ಶ್ರೀರಂಗಪಟ್ಟಣ ಪೊಲೀಸ್ ಠಾಣೆಗೆ […]

Advertisement

Wordpress Social Share Plugin powered by Ultimatelysocial