ಕುಮಾರಸ್ವಾಮಿ : ಹೃದಯ ಇದ್ದವರಿಗೆ ಮಾತ್ರ ಬೊಮ್ಮಾಯಿ ಭಾವನೆ ಅರ್ಥವಾಗುತ್ತದೆ

ಹೃದಯ ಇದ್ದವರಿಗೆ ಮಾತ್ರ ಬೊಮ್ಮಾಯಿ ಭಾವನೆ ಅರ್ಥವಾಗುತ್ತದೆ: ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರದಲ್ಲಿ ತಮ್ಮ ಅಧಿಕಾರದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವ ಬಗ್ಗೆ ನಾನು ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಆದರೆ ಭಾವನಾತ್ಮಕ ವ್ಯಕ್ತಿಗಳಿಗೆ ಮಾತ್ರ ಅದು ಅರ್ಥವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ಅವರು ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದಾರೆ.

ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಭಾವನಾತ್ಮಕ ವ್ಯಕ್ತಿಗಳಿಗೆ ಮಾತ್ರ ಅದು ಅರ್ಥವಾಗುತ್ತದೆ. ಆ ಸ್ಥಾನಕ್ಕೆ ಅವರು ಬರಬೇಕಾದರೆ ಆ ಕ್ಷೇತ್ರದ ಜನರೇ ಕಾರಣ. ಹೀಗಾಗಿ ಸಿಎಂ ಅವರು ಭಾವನಾತ್ಮಕವಾಗಿ ಮಾತನಾಡಿರಬಹುದು. ಅದರಲ್ಲಿ ತಪ್ಪೇನಿಲ್ಲ ಎಂದರು.

ಅವರ ಮಾತುಗಳು ತಾಯಿ ಹೃದಯ ಇರುವವರಿಗೆ ಮಾತ್ರ ಅರ್ಥವಾಗುತ್ತವೆ. ಬೇರೆಯವರಿಗೆ ಅದು ಅರ್ಥವಾಗಲ್ಲ. ನನ್ನ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ನಾನು ಅನೇಕ ಸಲ ಹೇಳಿದ್ದೇನೆ, ನನಗೆ ರಾಜಕೀಯ ಜನ್ಮ ಕೊಟ್ಟವರು ರಾಮನಗರದ ಜನ ಅಂತ. ಅವರ ಬಗ್ಗೆ ಹೇಳುವಾಗ ನಾನೂ ಭಾವುಕನಾಗಿದ್ದೇನೆ. ಇದು ಮನುಷ್ಯ ಸಹಜ ಗುಣ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಶಸ್ಸನ್ನು ಪಡೆಯಲು ನಿಮ್ಮ ಕಚೇರಿಯ ಮೇಜಿನ ಮೇಲೆ ಈ ವಸ್ತುಗಳನ್ನು ಇರಿಸಿ

Mon Dec 20 , 2021
ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ವಾಸ್ತು ಶಾಸ್ತ್ರದ ಪ್ರಕಾರ, ವ್ಯವಹಾರದಲ್ಲಿ ಪ್ರಗತಿ ಸಾಧಿಸಲು ಮತ್ತು ಕಚೇರಿ ವಾತಾವರಣವನ್ನು ಉತ್ತಮಗೊಳಿಸುವಲ್ಲಿ ಕಚೇರಿ ಟೇಬಲ್ ಪ್ರಮುಖ ಪಾತ್ರ ವಹಿಸುತ್ತದೆ. ವಾಸ್ತು ಪ್ರಕಾರ, ಕಚೇರಿಯ ಟೇಬಲ್ ಅನ್ನು ನಿಮ್ಮ ಬೆನ್ನು ಗೋಡೆಯ ಕಡೆಗೆ ಇರುವ ರೀತಿಯಲ್ಲಿ ಇಡಬೇಕು. ಅದನ್ನು ನೇರವಾಗಿ ಬಾಗಿಲಿನ ಮುಂದೆ ಇಡಬಾರದು. ಆಫೀಸ್ ಟೇಬಲ್‌ನ ಈಶಾನ್ಯ ದಿಕ್ಕಿನಲ್ಲಿ ಕಾಗದ ಮೇಲೆ ಸ್ಪಟಿಕದವನ್ನು ಅದರ ಮೇಲೆ ಇಡಬೇಕು. ಹಾಗೆಯೇ ಟೇಬಲ್‌ನ ಉತ್ತರದಲ್ಲಿ ಒಂದು ಕಪ್ ಚಹಾ ಮತ್ತು […]

Advertisement

Wordpress Social Share Plugin powered by Ultimatelysocial