ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ರಾಘವೇಂದ್ರ ಹಿಟ್ನಾಳ್ ಕಳೆದ ಮೂರು ದಿನಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನೆಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಒಬ್ಬರಾಗಿದ್ದಾರೆ. ಅದರಂತೆ ಯಶಸ್ಬಿಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದ ರಾಘವೇಂದ್ರ ಹಿಟ್ನಾಳ್ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಆಗುವವರಿಗೂ ತೆರೆಮರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕೊನೆಗೆ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾದ ಕೂಡಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ರಾಘವೇಂದ್ರ ಹಿಟ್ನಾಳ್ ಗೆ ಬಿ.ಫಾರಂ ಕೊಟ್ಟು, ಚುನಾವಣೆಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಶಾಸಕ ರಾಘವೇಂದ್ರ ಹಿಟ್ನಾಳ ಸಿದ್ದರಾಮಯ್ಯ ಅವರಿಗೆ ಅತ್ಯಂತ ಆಪ್ತರಾಗಿದ್ದು, ಯಾವುದೇ ಸೂಕ್ಷ್ಮ ಕೆಲಸಗಳಿದ್ದರೂ, ರಾಘವೇಂದ್ರ ಹಿಟ್ನಾಳ್ ಗೆ ಸಿದ್ದರಾಮಯ್ಯ ಸೂಚಿಸುತ್ತಾರೆ. ಕೊಪ್ಪಳ ವಿಧಾನಸಭಾ ಕ್ಷೇತ್ರಸಲ್ಲಿ ಸತತವಾಗಿ ಎರಡು ಬಾರಿ ಗೆದ್ದಿರುವ ಹಿಟ್ನಾಳ್ ಈ ಬಾರಿ ಚುನಾವಣಾ ಆಖಾಡದಲ್ಲಿದ್ದು, ಮೂರುನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿ ರಾಘವೇಂದ್ರ ಹಿಟ್ನಾಳ್ ಭರ್ಜರಿ ಪ್ರಯತ್ನದಲ್ಲಿದ್ದಾರೆ.
https://play.google.com/store/apps/details?id=com.speed.newskannada