ದೆಹಲಿ: ಇಂದು ದೇಶದೆಲ್ಲೆಡೆ ರಾಮನವಮಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ‘ದೇಶದ ಜನತೆಗೆ ರಾಮನವಮಿಯ ಶುಭಾಶಯಗಳು.
ಭಗವಾನ್ ಶ್ರೀರಾಮನ ಕೃಪೆಯಿಂದ ಪ್ರತಿಯೊಬ್ಬರೂ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಪಡೆಯಲಿ. ಜೈ ಶ್ರೀ ರಾಮ್!’ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಗುಜರಾತ್ನ ಜುನಾಗಢ್ನ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಾಲಯದ 14 ನೇ ಸಂಸ್ಥಾಪನಾ ದಿನಾಚರಣೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು 2008 ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದೇವಾಲಯವನ್ನು ಉದ್ಘಾಟಿಸಿದ್ದರು.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಕೂಡ ಟ್ವೀಟ್ ಮಾಡುವ ಮೂಲಕ, ‘ಎಲ್ಲಾ ದೇಶವಾಸಿಗಳಿಗೆ ರಾಮ ನವಮಿಯ ಶುಭಾಶಯಗಳು. ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅವರ ಜೀವನ, ಅವರ ಆತ್ಮಸಾಕ್ಷಿಯ ಮತ್ತು ಉನ್ನತ ಆದರ್ಶಗಳು ಇಡೀ ಮಾನವಕುಲಕ್ಕೆ ಮಾರ್ಗದರ್ಶನ ಮತ್ತು ಸ್ಫೂರ್ತಿಯ ಮೂಲವಾಗಿದೆ. ಭಗವಾನ್ ರಾಮನ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ’ ಎಂದು ತಿಳಿಸಿದ್ದಾರೆ.ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿ, ‘ಶ್ರೀರಾಮ ನವಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು. ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀರಾಮನು ನಮಗೆಲ್ಲರಿಗೂ ಗೌರವ ಮತ್ತು ಶಕ್ತಿಯ ಮೂಲವಾಗಿದೆ. ಜೈ ಶ್ರೀ ರಾಮ್!’ ಎಂದು ಬರೆದುಕೊಂಡಿದ್ದಾರೆ.ಭಗವಾನ್ ರಾಮನ ಜನ್ಮದಿನದ ಸಂಕೇತವಾಗಿ ರಾಮ ನವಮಿ ಹಬ್ಬವನ್ನು ಆಚರಿಸಲಾಗುತ್ತದೆ. ಭಗವಾನ್ ರಾಮನ ಜನ್ಮವನ್ನು ಗುರುತಿಸಲು ಪ್ರತಿ ವರ್ಷ ಚೈತ್ರ ನವರಾತ್ರಿಯ ಕೊನೆಯ ದಿನದಂದು ರಾಮ ನವಮಿಯನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಈ ಮಂಗಳಕರ ದಿನದಂದು, ಯುವತಿಯರಿಗೆ ಉಡುಗೊರೆಗಳನ್ನು ಮತ್ತು ಪ್ರಸಾದವನ್ನು ನೀಡಲಾಗುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada