ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ:

 

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸುತ್ತಿರುವ ಕೆಂಪೇಗೌಡರ ಭವ್ಯ‌ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದಲ್ಲೇ ಉದ್ಘಾಟಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಎಸ್.ಎಂ.ಕೃಷ್ಣ, ಇನ್ಫೋಸಿಸ್ ನಾರಾಯಣಮೂರ್ತಿ, ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿದ ಅವರು, 85 ಕೋಟಿ ರೂ.

ವೆಚ್ಚದಲ್ಲಿ ಕೆಂಪೇಗೌಡರ 108 ಅಡಿ ಪ್ರತಿಮೆ ಸ್ಥಾಪನೆ ಮಾಡಲಾಗುವುದು. ಜತೆಗೆ 25 ಕೋಟಿ ರೂ. ವೆಚ್ಚದಲ್ಲಿ ಇನ್ನಿತರ ಮೂಲ ಸೌಕರ್ಯ ಕಲ್ಪಿಸಲಾಗುವುದು. ಈ ಪ್ರತಿಮೆ ದೇಶದಲ್ಲೇ ಅತ್ಯಂತ ಭವ್ಯವಾಗಿ ಇರಲಿದೆ ಎಂದು ಹೇಳಿದರು.

ನಿರ್ಮಲಾನಂದನಾಥ ಸ್ವಾಮೀಜಿಗಳ ಆಗ್ರಹದ ಪ್ರಕಾರ ಮುಂದಿನ ಕೆಂಪೇಗೌಡ ಜಯಂತಿಯ ಒಳಗಾಗಿ ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು. ಈ ಕೆಲಸ ಎಂದೋ ಆಗಬೇಕಿತ್ತು. ನಾವು ಆ ಕಾರ್ಯವನ್ನು‌ ಮಾಡಿ ಮುಗಿಸುತ್ತೇವೆ. ಕೆಂಪೇಗೌಡರ ಆಶಯದ ಪ್ರಕಾರ ನವ ಬೆಂಗಳೂರು ನಿರ್ಮಾಣಕ್ಕೆ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದರು.

ಆಳುವವರು ಹಾಗೂ ಆಡಳಿತ ಮಾಡುವವರು ಬೇರೆ.‌ ದುರಂತ ಏನೆಂದರೆ ಈಗ ಆಳುವವರು ಆಡಳಿತ ಮಾಡುತ್ತಿದ್ದಾರೆ. ಹೀಗಾಗಿ ಸಮಸ್ಯೆಗಳು ಹಾಗೆಯೇ ಉಳಿದುಕೊಳ್ಳುತ್ತುವೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿ 1000 ಗುಂಡಿ ಇವೆ ಎಂದರೆ, ಪೊಲೀಸರು ಪ್ರಕಾರ 2000 ರಸ್ತೆ ಗುಂಡಿಗಳು

Mon Jun 27 , 2022
  ಬೆಂಗಳೂರು, ಜೂನ್ 27: ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬಂದ ವೇಳೆ ಬಿಬಿಎಂಪಿ 23 ಕೋಟಿ ಹಣವನ್ನು ವ್ಯಯ ಮಾಡಿ ರಸ್ತೆಗಳಿಗೆ ಡಾಂಬಾರನ್ನು ಹಾಕಿತ್ತು. ರಸ್ತೆಗಳಿಗೆ ಡಾಂಬಾರು ಹಾಕಿ ಮಿರ ಮಿರ ಮಿಂಚುವಂತೆ ಮಾಡಿದ್ದರು. ಆದರೆ, ಆ ರಸ್ತೆ ಪ್ರಧಾನಿ ಬಂದು ಹೋದ ಒಂದೆರಡು ದಿನದಲ್ಲೆ ಕಿತ್ತು ಹೋಗಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರಿಂದ ಎಚ್ಚೆತ್ತ ಬಿಬಿಎಂಪಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ಮಾಡಿದ್ದಾರೆ. ರಸ್ತೆಗುಂಡಿಗಳು […]

Advertisement

Wordpress Social Share Plugin powered by Ultimatelysocial