ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿನ ನೆರವು.

 

ಬಿಹಾರದ ಪ್ರಧಾನಿ ನರೇಂದ್ರ ಮೋದಿ  ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು  ನೀಡಿದ್ದ ಆರೋಪದಡಿ ಬಂಟ್ವಾಳದ  ನಾಲ್ವರ ಮನೆ ಮೇಲೆ ಎನ್​ಐಎ ದಾಳಿ  ನಡೆಸಿದೆ.ಭಾನುವಾರ ರಾತ್ರಿ ಈ ದಾಳಿ ನಡೆದಿದೆ ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆಸಿಕೊಳ್ಳಲಾಗಿದೆ. ಎನ್​ಐಎ ಅಧಿಕಾರಿಗಳು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ನಾಲ್ವರು ಆರೋಪಿಗಳು ಹಲವು ಬ್ಯಾಂಕ್ ಖಾತೆಗಳಿಗೆ ನಿರಂತರ ಹಣ ರವಾನೆ ಮಾಡಿರುವ ಮಾಹಿತಿ ಲಭ್ಯವಾಗಿದೆ. ಕಳೆದ ಹಲವು ತಿಂಗಳಿನಿಂದ ಈ ನಾಲ್ಕು ಜನರ ವ್ಯವಹಾರದ ಮೇಲೆ ಎನ್​ಐಎ ಟೀಂ ಕಣ್ಣಿಟ್ಟಿತ್ತು.ವಶಕ್ಕೆ ಪಡೆದುಕೊಂಡಿರುವ ಯುವಕರನ್ನು ಹೆಚ್ಚಿನ ವಿಚಾರಣೆಗಾಗಿ ಬಿಹಾರಕ್ಕೆ ಕರೆದೊಯ್ಯುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪವಾಡಸದೃಶ್ಯ ರೀತಿಯಲ್ಲಿ ಅಪಾಯದಿಂದ ಪಾರಾದ ಎ.ಆರ್. ರೆಹಮಾನ್ ಪುತ್ರ.

Mon Mar 6 , 2023
  ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರ ಪುತ್ರ ಎ.ಆರ್. ಅಮೀನ್ ಅವರು ಪ್ರದರ್ಶನ ನೀಡುತ್ತಿದ್ದ ವೇಳೆ ಅಪಘಾತದಿಂದ ಪಾರಾಗಿರುವ ವಿಷಯವನ್ನ ಬಹಿರಂಗಪಡಿಸಿದ್ದಾರೆ.ಕೆಲವು ದಿನಗಳ ಹಿಂದೆ ಸೆಟ್‌ ನಲ್ಲಿ ಕೆಲಸ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತ ತಪ್ಪಿದ ಬಗ್ಗೆ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ.ಅವರು ಪ್ರದರ್ಶನ ನೀಡುತ್ತಿದ್ದ ಸೆಟ್ ನಲ್ಲಿ ಬೃಹತ್ ಲೈಟ್ ಗೊಂಚಲು ಸೇರಿದಂತೆ ಹಲವಾರು ವಸ್ತುಗಳು ಕೆಳಗೆ ಬಿದ್ದ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ […]

Advertisement

Wordpress Social Share Plugin powered by Ultimatelysocial