ಬಿಹಾರದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು ನೀಡಿದ್ದ ಆರೋಪದಡಿ ಬಂಟ್ವಾಳದ ನಾಲ್ವರ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ.ಭಾನುವಾರ ರಾತ್ರಿ ಈ ದಾಳಿ ನಡೆದಿದೆ ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆಸಿಕೊಳ್ಳಲಾಗಿದೆ. ಎನ್ಐಎ ಅಧಿಕಾರಿಗಳು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ನಾಲ್ವರು ಆರೋಪಿಗಳು ಹಲವು ಬ್ಯಾಂಕ್ ಖಾತೆಗಳಿಗೆ ನಿರಂತರ ಹಣ ರವಾನೆ ಮಾಡಿರುವ ಮಾಹಿತಿ ಲಭ್ಯವಾಗಿದೆ. ಕಳೆದ ಹಲವು ತಿಂಗಳಿನಿಂದ ಈ ನಾಲ್ಕು ಜನರ ವ್ಯವಹಾರದ ಮೇಲೆ ಎನ್ಐಎ ಟೀಂ ಕಣ್ಣಿಟ್ಟಿತ್ತು.ವಶಕ್ಕೆ ಪಡೆದುಕೊಂಡಿರುವ ಯುವಕರನ್ನು ಹೆಚ್ಚಿನ ವಿಚಾರಣೆಗಾಗಿ ಬಿಹಾರಕ್ಕೆ ಕರೆದೊಯ್ಯುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada