ಕೆಜಿಎಫ್ ಸಿನಿಮಾ ಖ್ಯಾತಿಯ ಪ್ರಶಾಂತ್ ನೀಲ್ ಸದ್ಯ ಸಲಾರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ತಿಂಗಳು ಕೊನೆಯಲ್ಲಿ ಚಿತ್ರ ರಿಲೀಸ್ ಆಗಲಿದ್ದು ಹೀಗಾಗಿ ಸತತವಾಗಿ ಚಿತ್ರದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾದ ಬಳಿಕ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ನಟನೆಯ ಮುಂದಿನ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ.
ಇದೀಗ ತೆಲುಗಿನಲ್ಲಿ ಮತ್ತೊಂದು ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರಂತೆ.
ಪ್ರಭಾಸ್ ನಟನೆಯ ಸಲಾರ್ ಸಿನಿಮಾದ ಬಳಿಕ ಜ್ಯೂನಿಯರ್ ಎನ್.ಟಿ.ಆರ್ ಗಾಗಿ ಪ್ರಶಾಂತ್ ನೀಲ್ ಸಿನಿಮಾ ಮಾಡಬೇಕಿದೆ. ಈ ಸಿನಿಮಾದ ನಂತರ ಮತ್ತೆ ಪ್ರಭಾಸ್ ಜೊತೆಯೇ ಮತ್ತೊಂದು ತೆಲುಗು ಸಿನಿಮಾ ಮಾಡಲಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿಯನ್ನು ಸ್ವತಃ ನಿರ್ಮಾಪಕರೇ ಹೇಳಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಖ್ಯಾತ ತೆಲುಗು ನಿರ್ಮಾಪಕ ದಿಲ್ ರಾಜು, ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಸಂದರ್ಶನದಲ್ಲಿ ಮಾತನಾಡುತ್ತಾ, ‘ನಮ್ಮ ಬ್ಯಾನರ್ ನಲ್ಲಿ ಮತ್ತೊಂದು ಭಾರೀ ಬಜೆಟ್ ಸಿನಿಮಾ ನಿರ್ಮಾಣವಾಗಲಿದೆ. ಈ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್ ಆ ಸಿನಿಮಾದ ಹೀರೋ ಎಂದು ಘೋಷಿಸಿದ್ದಾರೆ. ಹಾಗಾಗಿ ಪ್ರಶಾಂತ್ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳನ್ನು ತೆಲುಗಿನಲ್ಲೇ ಮಾಡುತ್ತಿದ್ದಾರೆ. ಈ ವಿಷಯ ಪ್ರಶಾಂತ್ ಅಭಿಮಾನಿಗಳಿಗೆ ಸಂಭ್ರಮ ತಂದಿದೆ.
ಜ್ಯೂನಿಯರ್ ಸಿನಿಮಾ ಮುಗಿದ ನಂತರ ಶ್ರೀಮುರಳಿಗಾಗಿ ಪ್ರಶಾಂತ್ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ, ಕೆಜಿಎಫ್ 3 ಸಿನಿಮಾ ಕುರಿತು ಪ್ರಸ್ತಾಪವಾಗಿತ್ತು. ಇವೆರಡೂ ಬಿಟ್ಟು ಅಚ್ಚರಿಯ ಸಿನಿಮಾವೊಂದು ಪ್ರವೇಶ ಪಡೆದಿದೆ. ನಿರ್ಮಾಪಕ ದಿಲ್ ರಾಜು ಸಿನಿಮಾ ಮಾಡುವ ಕುರಿತು ಹೇಳಿಕೊಂಡಿದ್ದಾರೆ. ಆದರೆ, ಆ ಸಿನಿಮಾ ಯಾವಾಗ ಶುರುವಾಗಲಿದೆ ಎನ್ನುವ ಕುರಿತು ಯಾವುದೇ ಮಾಹಿತಿ ಇಲ್ಲ.
https://play.google.com/store/apps/details?id=com.speed.newskannada