ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ರೆಕಾರ್ಡ್ ಕ್ರಿಯೇಟ್ ಮಾಡಿದೆ.

ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ರೆಕಾರ್ಡ್ ಕ್ರಿಯೇಟ್ ಮಾಡಿದೆ. ಇದೀಗ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಮುಡಿಗೇರಿಸಿಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲೂ ಕೀರ್ತಿ ಪತಾಕೆ ಹಾರಿಸಿದೆ. ‘ನಾಟು ನಾಟು’ ಹಾಡಿಗೆ ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ ಗೋಲ್ಡನ್ ಗ್ಲೋಬ್ ಅವಾರ್ಡ್ ಗೆ ಬಾಚಿಕೊಂಡಿದ್ದಾರೆ.

ಗೋಲ್ಡನ್ ಗ್ಲೋಬ್ ಅವಾರ್ಡ್ ಮೂಲಕ ಇತಿಹಾಸ ಸೃಷ್ಟಿಸಿರುವ ‘ಆರ್ ಆರ್ ಆರ್’ ಚಿತ್ರದ ಸಂಗೀತ ನಿರ್ದೇಶಕ ಎಂ. ಎಂ. ಕೀರವಾಣಿ ಇಲ್ಲಿವರೆಗಿನ ಜರ್ನಿಗೆ ಕಾರಣರಾದ ಎಲ್ಲರಿಗೂ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಆಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರನ್ನು ಎಂ. ಎಂ. ಕೀರವಾಣಿ ಸ್ಮರಿಸಿದ್ದಾರೆ. ಅರ್ಜುನ್ ಸರ್ಜಾ ಮೊಟ್ಟ ಮೊದಲ ನಿರ್ದೇಶನದಲ್ಲಿ ಬಂದ ‘ಸೇವಗನ್’ ಹಾಗೂ ‘ಪ್ರತಾಪ್’ ಚಿತ್ರಕ್ಕೆ ಎಂ. ಎಂ ಕೀರವಾಣಿ ಅವರಿಗೆ ಅವಕಾಶ ನೀಡಿದ್ದರು. ಅರ್ಜುನ್ ಸರ್ಜಾ ನಟನೆಯ ‘ಅಳಿಮಯ್ಯ’, ತಮಿಳಿನ ‘ಕೊಂಡಟ್ಟಂ’ ಸಿನಿಮಾಗಳಿಗೂ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ಪುತ್ರಿ ಐಶ್ವರ್ಯ ಅರ್ಜುನ್ ನಟಿಸಿರುವ ‘ಪ್ರೇಮಬರಹ’ ಚಿತ್ರದ ಹಾಡೊಂದಕ್ಕೂ ಎಂ. ಎಂ ಕೀರವಾಣಿ ದನಿಯಾಗಿದ್ದಾರೆ.

ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಕೀರವಾಣಿ ತಮ್ಮ ಆರಂಭಿಕ ದಿನಗಳಲ್ಲಿ ಸಂಗೀತ ನಿರ್ದೇಶನಕ್ಕೆ ಅವಕಾಶ ನೀಡಿದ ಖ್ಯಾತ ನಟ ಹಾಗೂ ನಿರ್ದೇಶಕ ಅರ್ಜುನ್ ಸರ್ಜಾ ನೆನೆದು ಕೃತಘ್ನತೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೈವ್‌ನಲ್ಲಿ ಹೆಲಿಕಾಪ್ಟರ್ ಪತನ, ಉಕ್ರೇನ್‌ನ ಆಂತರಿಕ ಸಚಿವ ಸೇರಿ 16 ಮಂದಿ ಸಾವು.

Wed Jan 18 , 2023
ಕೈವ್‌: ಉಕ್ರೇನ್‌ನ ರಾಜಧಾನಿ ಕೈವ್‌ ಹೊರಗಿನ ಶಿಶುವಿಹಾರದ ಬಳಿ ಇಂದು ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರದೇಶದ ಗವರ್ನರ್ ತಿಳಿಸಿದ್ದಾರೆ. ಸತ್ತವರಲ್ಲಿ ಉಕ್ರೇನ್‌ನ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್ಸ್ಕಿ ಮತ್ತು ಇತರ ಅಧಿಕಾರಿಗಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಹಲವರು ರೋಧಿಸುತ್ತಿರುವುದು ಕೇಳಿ ಬರುತ್ತಿದೆ. ಬ್ರೋವರಿ ನಗರದಲ್ಲಿ, ಶಿಶುವಿಹಾರ ಮತ್ತು ವಸತಿ ಕಟ್ಟಡದ […]

Related posts

Advertisement

Wordpress Social Share Plugin powered by Ultimatelysocial