ಪಠಾಣ್ ವಿವಾದ:”ಸಿನಿಮಾಗಳ ಬಗ್ಗೆ ಅನಗತ್ಯ ಹೇಳಿಕೆ ನೀಡಬೇಡಿ”.

ಸಿನಿಮಾಗಳ ಬಗ್ಗೆ ಅನಗತ್ಯ ಹೇಳಿಕೆಗಳನ್ನು ನೀಡಿಬೇಡಿ ಎಂದು ಬಿಜೆಪಿ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ. ನವದೆಹಲಿಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಮೋದಿ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಬಿಜೆಪಿ ಮುಖಂಡರು ಸಿನಿಮಾಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈ ಹಿಂದೆ ಮಧ್ಯಪ್ರದೇಶದ ಗೃಹಮಂತ್ರಿ ನರೋತ್ತಮ್ ಮಿಶ್ರಾ ‘ಪಠಾಣ್’ ಸಿನಿಮಾ ಬಗ್ಗೆ ಕಮೆಂಟ್ ಮಾಡಿದ್ದರು.’ಪಠಾಣ್’ ಸಿನಿಮಾದ “ಭೇಷರಮ್ ರಂಗ್..” ಹಾಡಿನಲ್ಲಿ ದೀಪಿಕಾ ಪಡುಕೋಣೆ ಬಿಕಿನಿ ಬಗ್ಗೆ ವಿವಾದವನ್ನು ಸೃಷ್ಟಿಸಿದ್ದರು.

‘ಪಠಾಣ್’ ರನ್‌ಟೈಮ್ ಮಾಹಿತಿ ಬಹಿರಂಗ: ಜೋರಾಗಿದೆ ಬಾಕ್ಸಾಫೀಸ್ ಕಲೆಕ್ಷನ್ ಲೆಕ್ಕಾಚಾರ

ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿನಿಮಾಗಳ ವಿಚಾರವಾಗಿ ಅನಗತ್ಯ ಹೇಳಿಕೆಗಳನ್ನು ನೀಡಿದಂತೆ ಖಡಕ್ ಸಂದೇಶವನ್ನು ರವಾನೆ ಮಾಡಿದ್ದಾರೆ.

” ಪ್ರಧಾನಿ ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಆದರೆ, ಅವರ ಪ್ರತಿಯೊಂದು ಪದ ಹಾಗೂ ವಾಕ್ಯ ನಮ್ಮೆಲ್ಲರಿಗೂ ತುಂಬಾನೇ ಮುಖ್ಯ. ಅವರ ಮಾತುಗಳಿಂದ ಪ್ರತಿಯೊಬ್ಬರೂ ಪ್ರೇರಿತರಾಗಿದ್ದೇವೆ. ನಮ್ಮ ವರ್ತನೆಗಳು ಅವರ ಎನರ್ಜಿ ಹಾಗೂ ಮಾರ್ಗದರ್ಶನದಿಂದು ತುಂಬಿದ್ದು, ಇದು ಮುಂದಿನ ದಿನಗಳಲ್ಲೂ ಮುಂದುವರೆಯುತ್ತೆ.” ಎಂದು ಮಧ್ಯಪ್ರದೇಶದ ಗೃಹಮಂತ್ರಿ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ನರೋತ್ತಮ್ ಮಿಶ್ರಾ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ಪ್ರಮುಖ ಸಚಿವರಲ್ಲಿ ಒಬ್ಬರು. ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಮಿಶ್ರಾ ಕೆಲವೊಮ್ಮೆ ಸುದ್ದಿಯಲ್ಲಿ ಇರುತ್ತಾರೆ. ಅದು ಸಿನಿಮಾ ಆಗಿರಲಿ ಅಥವಾ ರಾಜಕೀಯ ಮುಖಂಡರ ಬಗ್ಗೆ ಆಗಿರಲಿ ಖಡಕ್ ಕಮೆಂಟ್‌ಗಳನ್ನು ಪಾಸ್ ಮಾಡುತ್ತಾರೆ.

ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಸಿನಿಮಾದ “ಬೇಷರಂ ಸಾಂಗ್..” ರಿಲೀಸ್ ಆದಾಗ ಮೊದಲು ಕಮೆಂಟ್ ಮಾಡಿದ್ದು ನರೋತ್ತಮ್ ಮಿಶ್ರಾ. ಈ ಹಾಡು ಕೊಳಕು ಮನಸ್ಥಿತಿಯನ್ನು ಪ್ರದರ್ಶಿಸುತ್ತದೆ. ಅಲ್ಲದೆ ಸಿನಿಮಾದ ಶೀರ್ಷಿಕೆ ಕೂಡ “ಆಕ್ಷೇಪಾರ್ಹ” ಎಂದು ಮಧ್ಯಪ್ರದೇಶದ ಗೃಹ ಮಂತ್ರಿ ನರೋತ್ತಮ್ ಮಿಶ್ರಾ ಆರೋಪಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್ವುಡ್ನಲ್ಲಿ ಭಾರಿ ನಿರೀಕ್ಷೆ.

Thu Jan 19 , 2023
ತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್ವುಡ್ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್ವುಡ್ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. […]

Advertisement

Wordpress Social Share Plugin powered by Ultimatelysocial