ಕೆಟ್ಟ ಮೇಲೆ ಬುದ್ದಿ ಬಂತಾ? ಸಂದರ್ಶನದಲ್ಲಿ ರಕ್ಷಿತ್-ರಿಷಬ್ ಬಗ್ಗೆ ರಶ್ಮಿಕಾ ಮಾತು.

ನ್ನಡ ಸಿನಿಮಾರಂಗದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ರಶ್ಮಿಕಾ ಇದೀಗ ಬೇರೆ ಬೇರೆ ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ಕಾಂತಾರ ಸಿನಿಮಾ ನೋಡಿಲ್ಲ ಎಂದು ಹೇಳಿ ಟ್ರೋಲ್ ಆಗಿದ್ದರು. ಬೆಂಗಳೂರು: ಕನ್ನಡ ಸಿನಿಮಾರಂಗದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ರಶ್ಮಿಕಾ ಇದೀಗ ಬೇರೆ ಬೇರೆ ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ.
ಇತ್ತೀಚಿಗಷ್ಟೆ ರಶ್ಮಿಕಾ ಕಾಂತಾರ ಸಿನಿಮಾ ನೋಡಿಲ್ಲ ಎಂದು ಹೇಳಿ ಟ್ರೋಲ್ ಆಗಿದ್ದರು, ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು. ಆದರೆ ಈಗ ರಶ್ಮಿಕಾ, ರಕ್ಷಿತ್ ಮತ್ತು ರಿಷಬ್ ಅವರನ್ನು ಹೊಗಳಲು ಪ್ರಾರಂಭಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಈ ಬದಲಾವಣೆ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ತೆಲುಗು ಯೂಟ್ಯೂಬ್ ವಾಹಿನಿಗೆ ಸಂದರ್ಶನ ನೀಡಿದ್ದಾರೆ.

ಆಗ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಅವರನ್ನು ಹಾಡಿಹೊಗಳಿದ್ದಾರೆ. ಚಿತ್ರಕ್ಕೆ ಬರಲು ಕಾರಣನೇ ಅವರಿಬ್ಬರು ಎಂದು ಹೇಳಿದ್ದಾರೆ. ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಶ್ಮಿಕಾ, ‘ರಕ್ಷಿತ್ ಮತ್ತು ರಿಷಬ್ ಚಿತ್ರರಂಗದ ದಾರಿ ತೋರಿಸಿದವರು. ನನಗೆ ಅವಕಾಶ ಕೊಟ್ಟಿದ್ದು ಅವರೇ.

ಇವತ್ತಿಗೂ ನಾನು ನನ್ನ ವೃತ್ತಿ ಜೀವನದಲ್ಲಿ ಅತ್ಯುತ್ತಮ ವ್ಯಕ್ತಿಗಳ ಜೊತೆ ಕೆಲಸ ಮಾಡಿದ್ದೀನಿ’ ಎಂದು ಹೇಳಿದ್ದಾರೆ. ರಶ್ಮಿಕಾ ಅವರ ಈ ಮಾತು ಕನ್ನಡ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ರಿಷಬ್ ಮತ್ತು ರಕ್ಷಿತ್ ಅಭಿಮಾನಿಗಳು ಶಾಕ್ ಆಗಿದ್ದಾರೆ. ಅದೇ ಸಂದರ್ಶನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಗ್ಗೆಯೂ ಮಾತನಾಡಿದ್ದಾರೆ.

ಅಂಜನಿ ಪುತ್ರ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸಿದ್ದರು. ಪುನೀತ್ ಜೊತೆ ನಟಿಸಿದ್ದು ತನ್ನ ಪುಣ್ಯ ಎಂದು ಹೇಳಿದ್ದಾರೆ. `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ನಟಿಸಿದೆ. ಅವರು ವಿಶಾಲವಾಗಿ ಹೇಗೆ ಆಲೋಚಿಸೋದು ಎಂಬ ಬಗ್ಗೆ ಹೇಳಿಕೊಟ್ಟರು.

ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಅವರಿಗೆ ಧನ್ಯವಾದ ಎಂದಿದ್ದಾರೆ ರಶ್ಮಿಕಾ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಸುಖೇಶ್ ನನ್ನ ಭಾವನೆಗಳ ಜೊತೆ ಆಟವಾಡಿಬಿಟ್ಟ'.

Thu Jan 19 , 2023
ಸುಖೇಶ್​ ಚಂದ್ರಶೇಖರನ ಬಲೆಯಲ್ಲಿ ಸಿಲುಕಿ ವಿಲ ವಿಲ ಅಂತ ಒದ್ದಾಡ್ತಿರೋ ರಕ್ಕಮ್ಮ ನಿನ್ನೆ ಕೋರ್ಟ್​ ಮುಂದೆ ಕಣ್ಣೀರಿಟ್ಟಿದ್ದಾರೆ. ಸುಖೇಶನಿಂದ ಪಡೆದ ಲಗ್ಸುರಿ ಗಿಫ್ಟ್​ಗಳ ಬಗ್ಗೆ ಇಂಚಿಂಚು ಮಾಹಿತಿಯನ್ನ ಕೋರ್ಟ್​ ಮುಂದೆ ಬಹಿರಂಗ ಪಡಿಸಿದ್ದಾರೆ. ಭಾರತೀಯ ಚಲನಚಿತ್ರರಂಗದಲ್ಲಿ ಮಿರ ಮಿರ ಮಿಂಚುತ್ತ ಅಭಿಮಾನಿಗಳ ಮನದರಸಿಯಾಗಿದ್ದ ಜಾಕ್ವೆಲಿನ್ ಫರ್ನಾಂಡೀಸ್, ಅಕ್ರಮ ಹಣವರ್ಗಾಣೆಯ ಕಿಂಗ್​ ಪಿನ್​ ಸುಖೇಶ್ ಚಂದ್ರಶೇಖರನ ಬಲೆಯಲ್ಲಿ ಸಿಲುಕಿ ವಿಲ ವಿಲ ಅಂತ ಒದ್ದಾಡ್ತಿದ್ದಾರೆ. ಅಕ್ರಮ ಹಣವರ್ಗಾವಣೆಯಲ್ಲಿ ಅಂದರ್​ ಆಗಿರೋ ಸುಖೇಶ್​ […]

Advertisement

Wordpress Social Share Plugin powered by Ultimatelysocial