ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕ್ರಾಂತಿ ಬಿಡುಗಡೆ ಸಮೀಪಕ್ಕೆ ಬಂದಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕ್ರಾಂತಿ ಬಿಡುಗಡೆ ಸಮೀಪಕ್ಕೆ ಬಂದಿದೆ. ನೆಚ್ಚಿನ ನಟ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಚಿತ್ರವನ್ನು ಬರೋಬ್ಬರಿ 22 ತಿಂಗಳುಗಳ ಬಳಿಕ ಬೆಳ್ಳಿತೆರೆ ಮೇಲೆ ನೋಡಿ ಸಂಭ್ರಮಿಸಲು ದರ್ಶನ್ ಅಭಿಮಾನಿಗಳು ಕಾತರರಾಗಿದ್ದಾರೆ. ಚಿತ್ರ ಮುಂದಿನ ವಾರದ ಗುರುವಾರದಂದೇ ಗಣರಾಜ್ಯೋತ್ಸವದ ಪ್ರಯುಕ್ತ ತೆರೆಗೆ ಬರಲಿದೆ.ಚಿತ್ರತಂಡ ಹಾಡುಗಳು ಹಾಗೂ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ. ಟ್ರೈಲರ್ ವೀಕ್ಷಿಸಿದ ಅಭಿಮಾನಿಗಳು ಹಾಗೂ ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಒಂದೊಳ್ಳೆ ಕಮರ್ಷಿಯಲ್ ಚಿತ್ರವನ್ನು ನಿರ್ದೇಶಕ ವಿ ಹರಿಕೃಷ್ಣ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಹೀಗೆ ನಿರೀಕ್ಷೆ ಹುಟ್ಟುಹಾಕಿರುವ ನೆಚ್ಚಿನ ನಟನ ಚಿತ್ರವನ್ನು ಬಹಳ ತಿಂಗಳುಗಳ ಬಳಿಕ ಚಿತ್ರಮಂದಿರದಲ್ಲಿ ವೀಕ್ಷಿಸಲು ಕಾತರರಾಗಿರುವ ಅಭಿಮಾನಿಗಳು ಚಿತ್ರದ ಮುಂಗಡ ಬುಕಿಂಗ್ ಯಾವಾಗ ಆರಂಭವಾಗಬಹುದು ಎಂದು ಕಾಯುತ್ತಿದ್ದಾರೆ.ಚಿತ್ರತಂಡ ನಿನ್ನೆ ( ಜನವರಿ 20 ) ಚಿತ್ರದ ಬುಕಿಂಗ್ ಆದಷ್ಟು ಬೇಗ ಶುರುವಾಗಲಿದೆ ಎಂದು ತಿಳಿಸಿದ್ದು, ದಿನಾಂಕವನ್ನು ಪ್ರಕಟಿಸಿಲ್ಲ. ಆದರೆ ನಿನ್ನೆಯೇ ತಿಪಟೂರಿನ ಲಕ್ಷ್ಮಿ ಚಿತ್ರಮಂದಿರದಲ್ಲಿ ಮಾತ್ರ ಕ್ರಾಂತಿ ಚಿತ್ರದ ಮುಂಗಡ ಬುಕಿಂಗ್ ಆರಂಭಗೊಂಡಿದೆ. ರಾಜ್ಯದೆಲ್ಲೆಡೆ ಇದೊಂದೇ ಚಿತ್ರಮಂದಿರದಲ್ಲಿ ಕ್ರಾಂತಿ ಚಿತ್ರದ ಮುಂಗಡ ಬುಕಿಂಗ್ ತೆರೆದಿದ್ದು, ಉಳಿದ ಚಿತ್ರಮಂದಿರಗಳಲ್ಲಿ ಯಾವಾಗ ಮುಂಗಡ ಬುಕಿಂಗ್ ಆರಂಭವಾಗಲಿದೆ ಎಂದು ಅಭಿಮಾನಿಗಳು ಕಾತರರಾಗಿ ಕಾಯುತ್ತಿದ್ದಾರೆ. ಈ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.. ಇನ್ನು ಕ್ರಾಂತಿ ಚಿತ್ರದ ಬೆಂಗಳೂರು ಹಾಗೂ ಇತರೆ ಪ್ರಮುಖ ನಗರ ಮತ್ತು ಪಟ್ಟಣಗಳ ಚಿತ್ರಮಂದಿರಗಳ ಮುಂಗಡ ಬುಕಿಂಗ್ ಇಂದು, ಶನಿವಾರ ( ಜನವರಿ 21 ) ಸಂಜೆ ಅಥವಾ ಭಾನುವಾರ ಬೆಳಗ್ಗೆ ಆರಂಭವಾಗುವ ಸಾಧ್ಯತೆ ಹೆಚ್ಚಿದೆ. ಮೊದಲಿಗೆ ಬೆಂಗಳೂರಿನ ಪ್ರಮುಖ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಬುಕಿಂಗ್ ಆರಂಭವಾಗಲಿದ್ದು, ಉಳಿದ ನಗರಗಳ ಸಿಂಗಲ್ ಸ್ಕ್ರೀನ್‌ಗಳ ಮುಂಗಡ ಬುಕಿಂಗ್ ಸಹ ಇದೇ ಸಮಯಕ್ಕೆ ಶುರುವಾಗಲಿದೆ. ಇನ್ನು ಕ್ರಾಂತಿ ಚಿತ್ರದ ಮಲ್ಟಿಪ್ಲೆಕ್ಸ್ ಬುಕಿಂಗ್ ಭಾನುವಾರ ಸಂಜೆ ವೇಳೆಗೆ ಆರಂಭವಾಗುವ ಸಾಧ್ಯತೆ ಹೆಚ್ಚಿದೆ. ಪಿವಿಆರ್ ಹಾಗೂ ಐನಾಕ್ಸ್ ರೀತಿಯ ನ್ಯಾಷನಲ್ ಮಲ್ಟಿಪ್ಲೆಕ್ಸ್ ಚೈನ್‌ಗಳಲ್ಲಿ ಕ್ರಾಂತಿ ಚಿತ್ರದ ಬುಕಿಂಗ್ ಸೋಮವಾರ ಆರಂಭವಾಗುವ ಸಾಧ್ಯತೆಗಳಿವೆ. ಒಟ್ಟಾರೆಯಾಗಿ ಜನವರಿ 23ರ ಸೋಮವಾರದಂದು ಕ್ರಾಂತಿ ಚಿತ್ರದ ಸಂಪೂರ್ಣ ಬುಕಿಂಗ್ ತೆರೆದಿರಲಿದೆ. ಇನ್ನು ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಹುಬ್ಬಳ್ಳಿ ಹಾಗೂ ಇನ್ನಿತರ ಪ್ರಮುಖ ನಗರಗಳಲ್ಲಿ ಕ್ರಾಂತಿ ಚಿತ್ರ ಮುಂಜಾನೆ ನಾಲ್ಕು ಗಂಟೆಯಿಂದಲೇ ಪ್ರದರ್ಶನವನ್ನು ಆರಂಭಿಸಲಿದೆ. ಕರ್ನಾಟಕ ಹೊರತುಪಡಿಸಿ ಚೆನ್ನೈ, ಹೈದರಾಬಾದ್, ಮುಂಬೈ ಹಾಗೂ ಕೊಲ್ಕತ್ತಾ ಸೇರಿದಂತೆ ಇತರೆ ರಾಜ್ಯದ ಪ್ರಮುಖ ನಗರಗಳಲ್ಲಿ ಸಹ ಕ್ರಾಂತಿ ಚಿತ್ರದ ಮುಂಗಡ ಬುಕಿಂಗ್ ಸೋಮವಾರ ತೆರೆಯಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಸಂತೇಮರಳ್ಳಿ ಶಿವಕುಮಾರ ಸ್ವಾಮೀಜಿಯವರ 4 ನೇ ವರ್ಷದ ಪುಣ್ಯ ಸ್ಮರಣೆ.

Sat Jan 21 , 2023
ಚಾಮರಾಜನಗರ ತಾಲ್ಲೂಕಿನ ಸಂತೆಮರಳ್ಳಿಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಸಂತೆಮರಳ್ಳಿ ಬಸ್ ನಿಲ್ದಾಣದಲ್ಲಿ ಶ್ರೀ ಶಿವಕುಮಾರ್ ಸ್ವಾಮಿಗಳ ಫೋಟೋ ಗೆ ಭಕ್ತ ವೃಂದದವರು ಪೂಜೆ ಸಲ್ಲಿಸಿ, ಸಿಹಿ ವಿತರಿಸಿ ನಂತರ ಪಟಾಕಿ ಸಿಡಿಸಿ ನಡೆದಾಡುವ ದೇವರಿಗೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಾದಪ್ಪ ಮಾತನಾಡಿ ಬಸವತತ್ವವನ್ನು ತಮ್ಮ ಬದುಕಿನಲ್ಲಿ ಪೂರ್ಣವಾಗಿ ಅಳವಡಿಸಿಕೊಂಡ ಶರಣರು ಶ್ರೀಗಳು.ಬದುಕನ್ನು ಬಡ ಮಕ್ಕಳ ಶಿಕ್ಷಣ, ದಾಸೋಹ ವ್ಯವಸ್ಥೆಗಾಗಿ […]

Related posts

Advertisement

Wordpress Social Share Plugin powered by Ultimatelysocial