ಅಥರ್ವ್ ಆರ್ಯ ನಿರ್ದೇಶನದ ಫ್ಯಾಮಿಲಿ ಎಂಟರ್‌ಟೈನರ್‌ನಲ್ಲಿ ನೆನಪಿರಲಿ ಪ್ರೇಮ್,

ಗಾಗಲೇ ಬಿಡುಗಡೆಗೆ ಸಿದ್ಧವಾಗಿರುವ ಜೂಟಾಟ ಮತ್ತು ಅರ್ಧದಷ್ಟು ಪೂರ್ಣಗೊಂಡ ಹಾಗೂ ಹೊಸಬರೇ ನಟಿಸಿರುವ ಗುಬ್ಬಚ್ಚಿ ಚಿತ್ರದ ನಂತರ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕ ಅಥರ್ವ್ ಆರ್ಯ ಸಜ್ಜಾಗುತ್ತಿದ್ದಾರೆ. ಕೌಟುಂಬಿಕ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನೆನಪಿರಲಿ ಖ್ಯಾತಿಯ ಪ್ರೇಮ್ ಮತ್ತು ತಬಲಾ ನಾಣಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಈಗಾಗಲೇ ಬಿಡುಗಡೆಗೆ ಸಿದ್ಧವಾಗಿರುವ ಜೂಟಾಟ ಮತ್ತು ಅರ್ಧದಷ್ಟು ಪೂರ್ಣಗೊಂಡ ಹಾಗೂ ಹೊಸಬರೇ ನಟಿಸಿರುವ ಗುಬ್ಬಚ್ಚಿ ಚಿತ್ರದ ನಂತರ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕ ಅಥರ್ವ್ ಆರ್ಯ ಸಜ್ಜಾಗುತ್ತಿದ್ದಾರೆ.
ಕೌಟುಂಬಿಕ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನೆನಪಿರಲಿ ಖ್ಯಾತಿಯ ಪ್ರೇಮ್ ಮತ್ತು ತಬಲಾ ನಾಣಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಾತ್ಕಾಲಿಕವಾಗಿ ಪ್ರೊಡಕ್ಷನ್ 1 ಎಂದು ಹೆಸರಿಸಲಾಗಿರುವ ಈ ಚಿತ್ರಕ್ಕೆ ಜನವರಿ 23 ರಂದು ಮುಹೂರ್ತ ನೆರವೇರಲಿದ್ದು, ಕೆಆರ್ಎಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿನ ಈ ಚಿತ್ರವು ಫೆಬ್ರುವರಿ 1 ರಂದು ಚಿತ್ರೀಕರಣ ಪ್ರಾರಂಭಿಸಲಿದೆ. ನಿರ್ದೇಶಕ ಅಥರ್ವ್ ಅವರೇ ಚಿತ್ರದ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಚಿತ್ರವು ಕುಟುಂಬದಲ್ಲಿನ ತಂದೆಯ ಪ್ರಾಮುಖ್ಯತೆಯ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಪ್ರೇಮ್ ಸಾಫ್ಟ್ವೇರ್ ಕಂಪನಿಯನ್ನು ನಡೆಸುವ ಉದ್ಯಮಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಚಿತ್ರದ ಛಾಯಾಗ್ರಾಹಕರಾಗಿ ನಾಗರಾಜ್ ಡಿಆರ್, ಸಂಗೀತ ನಿರ್ದೇಶಕರಾಗಿ ಆಕಾಶ್ ಪರ್ವ ಮತ್ತು ಸಂಕಲನಕಾರರಾಗಿ ವೇದಿಕ್ ವೀರ ಅವರ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ. ಚಿತ್ರದ ಸಂಪೂರ್ಣ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯಲಿದ್ದು, ನಿರ್ದೇಶಕರು ಚಿತ್ರಕ್ಕೆ ನಾಯಕಿಯ ಹುಡುಕಾಟದಲ್ಲಿ ತೊಡಗಿದ್ದಾರೆ. ಪೋಷಕ ಪಾತ್ರವರ್ಗದಲ್ಲಿ ಬಾಲ ರಾಜವಾಡಿ, ಗಿರೀಶ್ ಜತ್ತಿ ಮತ್ತು ಮಿತ್ರ ಮುಂತಾದ ಹೆಸರುಗಳಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಕರಾವಳಿ ಕರ್ನಾಟಕಕ್ಕೆ ವಿಶೇಷವಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ.

Sat Jan 21 , 2023
ಉಚಿತ ವಿದ್ಯುತ್, ಉಚಿತ ಅಕ್ಕಿ, ಮಹಿಳೆಯರಿಗೆ ಪ್ರತ್ಯೇಕ ಬಜೆಟ್ ಆಯ್ತು, ಇದೀಗ ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆಯ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ.ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ   ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಕಳೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಇಲ್ಲದೆ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಇದೀಗ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಶತಾಯಗತಾಯವಾಗಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ […]

Advertisement

Wordpress Social Share Plugin powered by Ultimatelysocial