ಕರವೇ ಪ್ರವೀಣ್ ಶೆಟ್ಟಿ ಪುತ್ರನ ಸಿನಿಮಾದಲ್ಲಿ ಹಾಡಿದ ಗಾಯಕಿ ಮಂಗ್ಲಿ.

ಬಿ.ಜು. ಶಿವಾನಂದ್ ನಿರ್ಮಿಸಿರುವ, ರಾಜ ವೆಂಕಯ್ಯ ನಿರ್ದೇಶನದಲ್ಲಿ ಪ್ರವೀರ್ ಶೆಟ್ಟಿ ನಾಯಕರಾಗಿ ನಟಿಸಿರುವ “ಸೈರನ್” ಚಿತ್ರದ ಹಾಡೊಂದನ್ನು ಖ್ಯಾತ ಗಾಯಕಿ ಮಂಗ್ಲಿ ಹಾಡಿದ್ದಾರೆ. ಚಿನ್ಮಯ್ ಬಾವಿಕೆರೆ ಬರೆದಿರುವ “ಎಣ್ಣೆ ಹೊಡೆಯೋ ಟೈಮಲ್ಲಿ ನನ್ನ ಸ್ವಲ್ಪ ನೆನಸಿಕೊಳ್ಳಿ” ಎಂಬ ಹಾಡನ್ನು ಮಂಗ್ಲಿ ಹಾಡಿದ್ದಾರೆ.

ಈ ಹಾಡಿನ ಲಿರಿಕಲ್ ವಿಡಿಯೋ ಜ. 24 ರಂದು ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಸೈರನ್ ಸಿನಿಮಾ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಲಾಸ್ಯ “ಸೈರನ್” ಚಿತ್ರದ ನಾಯಕಿ. ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್, ಸ್ಪರ್ಶ ರೇಖಾ, ಸಾಯಿಧೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ನಾಗೇಶ್ ವಿ ಆಚಾರ್ಯ ಛಾಯಾಗ್ರಹಣ, ವಾಲಿ ಕುಲೇಸ್ ಸಂಕಲನ, ಚಂದ್ರು ಬಂಡೆ, ನರಸಿಂಹ ಸಾಹಸ ನಿರ್ದೇಶನ ಹಾಗೂ ಕಲೈ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಜುನಿ ಜೋಸೆಫ್ ಮತ್ತು ಕೆ.ರಮೇಶ್ ಸಹ ನಿರ್ಮಾಪಕರು. ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಖರ್ಜೂರದ ಉಪಯೋಗಗಳು.

Sun Jan 22 , 2023
ಖರ್ಜೂರ ಒಂದು ರುಚಿಕರ ಹಾಗೂ ಶಕ್ತಿವರ್ಧಕ ಆಹಾರ. ಇದರಲ್ಲಿ ಕಬ್ಬಿಣದ ಅಂಶ ಜಾಸ್ತಿ ಇರುತ್ತದೆ. ಇದು ರುಚಿಯಲ್ಲಿ ಸಿಹಿಯಾಗಿದ್ದು ಹಾಗೂ ಪುಷ್ಠಿಕರವಾದದ್ದು, ರಕ್ತಪಿತ್ತವನ್ನು ನಿವಾರಿಸುತ್ತದೆ. ಆಮಶಂಕೆ, ಅತಿಸಾರ, ನರಗಳ ದೌರ್ಬಲ್ಯ ನಿವಾರಣೆ, ರಕ್ತವೃದ್ಧಿಗೆ, ಮಕ್ಕಳಿಗೆ ಎಲ್ಲರಿಗೂ ಒಳ್ಳೆಯದು.  ನರಗಳ ದೌರ್ಬಲ್ಯಕ್ಕಾಗಿ, ಖರ್ಜೂರದ ಬೀಜ ತೆಗೆದು ರಾತ್ರಿ ಹಾಲಿನಲ್ಲಿ ನೆನೆಹಾಕಿ. ಬೆಳಿಗ್ಗೆ ಅದೇ ಹಾಲಿನಲ್ಲಿ ನುಣ್ಣಗೆ ರುಬ್ಬಿಕೊಳ್ಳಿ. ಅದಕ್ಕೆ ಸ್ವಲ್ಪ ಏಲಕ್ಕಿ ಪುಡಿ ಹಾಗೂ ಸ್ವಲ್ಪ ಜೇನುತುಪ್ಪ ಸೇರಿಸಿ ಇದನ್ನು ಬೆಳಿಗ್ಗೆ […]

Advertisement

Wordpress Social Share Plugin powered by Ultimatelysocial