ಮೈಸೂರಿನಲ್ಲಿ “ಜಸ್ಟ್ ಪಾಸ್” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

ರಾಯ್ಸ್ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಜಸ್ಟ್ ಪಾಸ್” ಚಿತ್ರಕ್ಕೆ ಅರಮನೆ ನಗರಿ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮೈಸೂರಿನ ಹಾರ್ಡ್ವಿಕ್ ಪಬ್ಲಿಕ್ ಕಾಲೇಜ್, ನಂಜರಾಜ ಹಾಲ್, ಆಲಮ ಚೌಟ್ರಿ, ಗೌರ್ನಮೆಂಟ್ ಗೆಸ್ಟ್ ಹೌಸ್, ಲೇಡಿಸ್ ಕ್ಲಬ್ ಮುಂತಾದ ಕಡೆ 25 ದಿನಗಳ ಚಿತ್ರೀಕರಣ ನಡೆದಿದೆ. ನಾಯಕ ಶ್ರೀ, ನಾಯಕಿ ಪ್ರಣತಿ, ಸಾಧುಕೋಕಿಲ, ರಂಗಾಯಣ ರಘು, ಸುಚೇಂದ್ರ ಪ್ರಸಾದ್, ದೀಪಕ್ ರೈ(ಕಾಂತಾರ), ಪ್ರಕಾಶ್ ತುಂಬಿನಾಡು, ಗೋವಿಂದೇಗೌಡ, ದಾನಪ್ಪ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

“ತರ್ಲೆ ವಿಲೇಜ್”, ” ಪರಸಂಗ “, “ದೊಡ್ಡಹಟ್ಟಿ ಬೋರೇಗೌಡ” ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ರಘು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹರ್ಷವರ್ಧನ್ ರಾಜ್ “ಜಸ್ಟ್ ಪಾಸ್” ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಸುಜಯ್ ಕುಮಾರ್ ಛಾಯಾಗ್ರಹಣ ಮಾಡುತ್ತಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂಬೈ ಸ್ಥಳೀಯ ಸಂಸ್ಥೆ ಚುನಾವಣೆ.

Mon Jan 23 , 2023
  ಮುಂಬೈ: ಮಹಾರಾಷ್ಟ್ರದ ಮುಂಬೈ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗ ಪ್ರಕಾಶ್‌ ಅಂಬೇಡ್ಕರ್‌ ನೇತೃತ್ವದ ವಂಚಿತ ಬಹುಜನ ಅಘಾಡಿ (VBA) ಜತೆ ಮೈತ್ರಿ  ) ಮಾಡಿಕೊಂಡಿದ್ದಾರೆ. ಸ್ಥಳೀಯ ಚುನಾವಣೆಗೂ ಮುನ್ನ ಇದು ಮಹತ್ತರ ಬೆಳವಣಿಗೆ ಎಂದೇ ಹೇಳಲಾಗುತ್ತಿದೆ. ಕಳೆದ ವರ್ಷ ಏಕನಾಥ್‌ ಶಿಂಧೆ ಅವರು ಶಿವಸೇನೆಯಿಂದ ಹೊರಬಂದು ಹೊಸದೊಂದು ಬಣ (ಬಾಳಾಸಾಹೇಬಂಚಿ ಶಿವಸೇನೆ-BSS) ರಚಿಸಿದ ಬಳಿಕ ನಡೆಯುತ್ತಿರುವ ಮೊದಲ […]

Advertisement

Wordpress Social Share Plugin powered by Ultimatelysocial