ಮತಾಂತರ ನಿಷೇಧ ಕಾಯ್ದೆಗೆ ಒಪ್ಪಿಗೆ: ಡಿ.21ರಂದು ಮಂಡನೆ

ಮತಾಂತರ ನಿಷೇಧ ಕಾಯ್ದೆಗೆ ಒಪ್ಪಿಗೆ: ಡಿ.21ರಂದು ಮಂಡನೆ

ಬೆಳಗಾವಿ, ಡಿಸೆಂಬರ್ 20: ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲೇ ಮಂಡಿಸಲು ಸರ್ಕಾರ ತೀರ್ಮಾನಿಸಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ.

 

ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ಪಡೆದಾಗಿದ್ದು, ಡಿಸೆಂಬರ್ 21ರಂದು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತಯಾರಿ ನಡೆಸಿದೆ.

ಈ ವಿಧೇಯಕ ಮಂಡನೆಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಬಿಜೆಪಿ ಮಾತ್ರ ಶತಾಯ ಗತಾಯ ಈ ವಿಧೇಯಕ ಮಂಡನೆಗೆ ಮುಂದಾಗಿದೆ.

ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಸೇರಿದಂತೆ ಎಲ್ಲ ಸಚಿವರುಗಳು ಸಹ ವಿಧೇಯಕ ಮಂಡನೆಗೆ ಒಲವು ತೋರಿದ್ದು, ಈ ಸಂಬಂಧ ಈಗಾಗಲೇ ಹೇಳಿಕೆಗಳನ್ನು ನೀಡಿದ್ದು, ಇದೇ ಅಧಿವೇಶನದಲ್ಲಿ ವಿರೋಧ ಪಕ್ಷದ ವಿರೋಧಗಳ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಮಂಡನೆಯಾಗುವುದು ನಿಶ್ಚಿತ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭೂಹಗರಣದ ಸದ್ದಿನಲ್ಲಿ ನಗಣ್ಯವಾದ ಸಮಸ್ಯೆಗಳು

Mon Dec 20 , 2021
ಬೆಳಗಾವಿ, ಡಿ.20- ಇಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಬೈರತಿ ಬಸವರಾಜ ಅವರ ಭೂ ಹಗರಣದ ಸದ್ದೇ ಹೆಚ್ಚಾಗಿದ್ದು, ಎಂಇಎಸ್ ಪುಂಡಾಟಿಕೆ ಸೇರಿದಂತೆ ಹಲವಾರು ವಿಷಯಗಳ ಚರ್ಚೆ ನಗಣ್ಯವಾಗಿ ಹೋಯಿತು. ಉಭಯ ಸದನಗಳಲ್ಲೂ ಕಾಂಗ್ರೆಸ್ ಬೈರತಿ ಬಸವರಾಜ ಅವರ ಭೂ ಹಗರಣದಲ್ಲಿ ನ್ಯಾಯಾಲಯ ನೀಡಿರುವ ತೀರ್ಪಿನ ಕುರಿತು ಪ್ರಸ್ತಾಪಿಸಿ ಚರ್ಚೆಗೆ ಪಟ್ಟು ಹಿಡಿದಿತ್ತು. ಆದರೆ, ಸರ್ಕಾರ ಪ್ರಕರಣ ನ್ಯಾಯಾಲಯದಲ್ಲಿ ರುವುದರಿಂದ ನಿಯಮಾನುಸಾರ ಚರ್ಚೆಗೆ ಅವಕಾಶವಿಲ್ಲ ಎಂದು ಪ್ರತಿಪಾದಿಸಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ […]

Advertisement

Wordpress Social Share Plugin powered by Ultimatelysocial