ಬೆಂಗಳೂರು: ದೇವಸ್ಥಾನಗಳು ಸರ್ಕಾರದ ಹಿಡಿತದಿಂದ ಮುಕ್ತ ಮಾಡುತ್ತಿರುವುದಕ್ಕೆ ಸ್ವಾಗತವಿದೆ. ತಮಿಳುನಾಡಿನಲ್ಲೂ ಈ ಒತ್ತಾಯವಿದೆ. ತಮಿಳುನಾಡು ಸರ್ಕಾರದ ನಡೆ ಏನಿರುತ್ತದೆಂದು ನಾವೂ ಕಾದು ನೋಡುತ್ತಿದ್ದೇವೆ ಎಂದು ಬಿಜೆಪಿ ನಾಯಕಿ ಖಷ್ಬೂ ಹೇಳಿದರು.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕರ್ನಾಟಕದಲ್ಲಿ ದೇವಸ್ಥಾನಗಳನ್ನು ನಿಯಂತ್ರಣ ಕಾಯ್ದೆಗಳಿಂದ ಮುಕ್ತಗೊಳಿಸುವ ಚಿಂತನೆ ಇದೆ. ತಮಿಳುನಾಡಿನಲ್ಲೂ ಚುನಾವಣೆ ವೇಳೆ ದೇವಸ್ಥಾನಗಳನ್ನು ಮುಕ್ತಗೊಳಿಸುವ ಭರವಸೆ ಕೊಡಲಾಗಿತ್ತು ಎಂದರು.
ಪ್ರಧಾನಿ ನೇತೃತ್ವದ ಪೋಷಣ್ ಅಭಿಯಾನದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಸ್ವಸ್ಥ ಬಾಲಕ್, ಸ್ವಸ್ಥ ಬಾಲಿಕಾ ಸ್ಪರ್ಧೆ ಇದೆ. ಅಪೌಷ್ಟಿಕತೆಯುಳ್ಳ 0-6 ವರ್ಷದ ಮಕ್ಕಳನ್ನು ದೇಶಾದ್ಯಂತ ಪತ್ತೆ ಮಾಡಲಾಗುತ್ತಿದೆ. ಆಶಾವಾಡಿ, ಅಂಗನವಾಡಿಗಳಲ್ಲಿ ಈ ಮಕ್ಕಳ ನೋಂದಣಿ ಮಾಡುವ ಕಾರ್ಯ ನಡೆಯುತ್ತಿದೆ. ಈ ಅಭಿಯಾನವನ್ನು ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳುವ ಬಗ್ಗೆ ಸಿಎಂ ಬೊಮ್ಮಾಯಿ ಜತೆ ಇವತ್ತು ಚರ್ಚೆ ನಡೆಸಿದ್ದೇನೆ ಎಂದು ಖುಷ್ಬೂ ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: